ಗುರುವಾಯೂರ್ ಶ್ರೀಕೃಷ್ಣ ದೇವಾಲಯದಲ್ಲಿ ಪ್ರಧಾನಿ ಮೋದಿಗೆ ತಾವರೆ ಹೂಗಳಿಂದ ತುಲಾಭಾರ
Update: 2019-06-08 06:42 GMT
ತಿರುವನಂತಪುರ, ಜೂ.8: ಕೇರಳದ ಗುರುವಾಯೂರ್ ಶ್ರೀಕೃಷ್ಣ ದೇವಾಲಯದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬೆಳಗ್ಗೆ ತಾವರೆ ಹೂಗಳಿಂದ ತುಲಾಭಾರ ಸೇವೆ ಸಲ್ಲಿಸಿದರು.
ಶುಕ್ರವಾರ ರಾತ್ರಿ ಕೊಚ್ಚಿಗೆ ಆಗಮಿಸಿದ್ದ ಪ್ರಧಾನಿ ಮೋದಿ ಇಂದು ಬೆಳಗ್ಗೆ ಗುರುವಾಯೂರ್ ಶ್ರೀಕೃಷ್ಣ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಬಳಿಕ ತುಲಾಭಾರ ಸೇವೆ ಸಲ್ಲಿಸಲಾಯಿತು.
ಪ್ರಧಾನಿ ಮೋದಿ ತುಲಾಭಾರ ಸೇವೆಗಾಗಿ 112 ಕೆ.ಜಿ. ತಾವರೆ ಹೂವುಗಳನ್ನು ತಮಿಳುನಾಡಿನ ನಾಗರಕೊಯಿಲ್ ನಿಂದ ತರಿಸಲಾಗಿತ್ತು. 2008ರಲ್ಲೂ ಮೋದಿ ಅವರು ಇದೇ ದೇವಸ್ಥಾನದಲ್ಲಿ ತಾವರೆ ಹೂವುಗಳಿಂದ ತುಲಾಭಾರ ಸೇವೆ ಸಮರ್ಪಿಸಿದ್ದರು.