ಯುವಕನ ಕೊಲೆ: ನಾಲ್ವರ ಬಂಧನ

Update: 2019-06-08 14:25 GMT

ಬೆಂಗಳೂರು, ಜೂ.8: ಹಣ ಹಂಚಿಕೆ ವಿಚಾರದಲ್ಲಿ ನಡೆಯುತ್ತಿದ್ದ ಗಲಾಟೆ ಬಿಡಿಸಲು ಹೋಗಿದ್ದ ಸಿಗ್ಮತ್ ಎಂಬಾತನಿಗೆ ಚಾಕು ಇರಿದು ಕೊಲೆ ಮಾಡಿದ್ದ ನಾಲ್ವರು ಆರೋಪಿಗಳನ್ನು ಇಲ್ಲಿನ ಜೆ.ಜೆ.ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ನಗರದ ನಿವಾಸಿಗಳಾದ ಬುಡೇನ್, ಸಾಧಿಕ್, ಶೋಯೆಬ್, ಮುಬಾರಕ್ ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಮದ್ಯದ ಅಮಲಿನಲ್ಲಿ ವ್ಯಾಪಾರಕ್ಕೆ ಸಂಬಂಧಪಟ್ಟ ವಿಷಯಕ್ಕೆ ಗಲಾಟೆ ಆರಂಭಿಸಿದ್ದರು. ಆಗ ಅಲ್ಲೇ ಕೆಲಸ ಮಾಡುತ್ತಿದ್ದ ಸಿಗ್ಮತ್ ಜಗಳ ಬಿಡಿಸಲು ಬಂದು, ಸುಮ್ಮನೆ ಯಾಕೆ ಜಗಳ ಮಾಡಿಕೊಳ್ಳುತ್ತಿದ್ದೀರಾ ಬಂದಿರುವ ಹಣವನ್ನು ಸಮನಾಗಿ ಹಂಚಿಕೊಳ್ಳಿ ಎಂದು ಸಲಹೆ ನೀಡಿದರು.

ಆದರೆ, ಕೋಪದಲ್ಲಿದ್ದ ಆರೋಪಿಗಳು ಸಿಗ್ಮತ್‌ಗೆ ಚಾಕುವಿನಿಂದ ಇರಿದಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಿಗ್ಮತ್‌ನನ್ನು ತಕ್ಷಣವೇ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದ. ಈ ಸಂಬಂಧ ಆರೋಪಿಗಳನ್ನು ಬಂಧಿಸಿ, ವಿಚಾರಣೆಗೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News