ದಾವಣಗೆರೆ: ಕೆಪಿಟಿಸಿಎಲ್ ನೌಕರ ಶವವಾಗಿ ಪತ್ತೆ

Update: 2019-06-08 15:52 GMT

ದಾವಣಗೆರೆ, ಜೂ.8: ನಗರದ ಟಿವಿ ಸ್ಟೇಷನ್ ಕೆರೆಯಲ್ಲಿ ಕೆಪಿಟಿಸಿಎಲ್ ನೌಕರರೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ.

ಶಿವಕುಮಾರಸ್ವಾಮಿ ಬಡಾವಣೆಯ ನಿವಾಸಿ ಬಿ.ಎಸ್.ಹಾಲೇಶಪ್ಪ (55) ಮೃತ ವ್ಯಕ್ತಿ. ಟಿವಿ ಸ್ಟೇಷನ್ ಕೆರೆಯಲ್ಲಿ ಶವ ತೇಲಾಡುವುದನ್ನು ನೋಡಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತರು ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದ್ದು, ಸಾವಿಗೆ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಕುರಿತು ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News