ಮಟ್ಕಾ ಕಾರ್ಯಾಚರಣೆ: ನಾಲ್ವರ ಬಂಧನ

Update: 2019-06-08 16:13 GMT

ಉಡುಪಿ, ಜೂ.8: ಮಟ್ಕಾ ಜುಗಾರಿಗೆ ಸಂಬಂಧಿಸಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜೂ.7ರಂದು ಕಾರ್ಯಾಚರಣೆ ನಡೆಸಿದ ಪೊಲೀಸರು ಒಟ್ಟು ನಾಲ್ವರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗಂಗೊಳ್ಳಿ ಗ್ರಾಮದ ಮೀನು ಮಾರ್ಕೆಟ್ ಬಳಿ ಗಂಗೊಳ್ಳಿಯ ದಾಕುಹಿತ್ಲು ನಿವಾಸಿ ಪ್ರಭಾಕರ(48), ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಬಿದ್ರಿ ಪೇಟೆಯ ಮೀನು ಮಾರುಕಟ್ಟೆ ಬಳಿ ಹೆಜಮಾಡಿಯ ಚಂದ್ರ(43), ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಉಪ್ಪೂರು ಲಕ್ಷ್ಮೀ ಬಾರ್ ಬಳಿ ಉಗ್ಗೇಲ್ಬೆಟ್ಟುವಿನ ರತ್ನಾಕರ ಪೂಜಾರಿ(45) ಹಾಗೂ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ವಡೇರಹೋಬಳಿ ಗ್ರಾಮದ ಹುಣ್ಸೆಕಟ್ಟೆ ಎಂಬಲ್ಲಿ ಸ್ಥಳೀಯ ನಿವಾಸಿ ನಾಗೇಶ ವಿ.(40) ಎಂಬವರನ್ನು ಬಂಧಿಸಿ ನಗದು ವಶಪಡಿಸಿಕೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News