ಬಡ್ಡಿ ನೀಡದ್ದಕ್ಕೆ ಆಟೊ ಚಾಲಕನಿಗೆ ಕಿರುಕುಳ: ಆರೋಪ

Update: 2019-06-09 17:30 GMT

ಬೆಂಗಳೂರು, ಜೂ.9: ಸಾಲ ಪಡೆದ ಹಣಕ್ಕೆ ಬಡ್ಡಿ ನೀಡದ ಕಾರಣ, ಲಾಡ್ಜ್‌ಯೊಂದರ ಕೊಠಡಿಯಲ್ಲಿ ಕೂಡಿ ಹಾಕಿ ಆಟೊ ಚಾಲಕನಿಗೆ ಕಿರುಕುಳ ನೀಡಿದ ಘಟನೆ ನೆಲಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನೆಲಮಂಗಲದ ಆಟೊ ಚಾಲಕ ವಿನಯ್ ಕುಮಾರ್, ನವೀನ್ ಎಂಬಾತನಿಂದ 10 ವರ್ಷಗಳ ಹಿಂದೆ 35 ಸಾವಿರ ರೂ.ಗಳನ್ನು ಸಾಲ ಪಡೆದು ಪ್ರತಿ ತಿಂಗಳು ಬಡ್ಡಿ ಪಾವತಿ ಮಾಡುತ್ತಿದ್ದ. ಆದರೆ, ಇತ್ತೀಚೆಗೆ ಬಡ್ಡಿ ಹಣ ನೀಡುವುದನ್ನು ನಿಲ್ಲಿಸಿದ್ದರಿಂದ ಲಾಡ್ಜ್‌ನಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ವಿನಯ್ ಕುಮಾರ್, ಪತ್ನಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಆಕೆಯ ಜೊತೆಗೆ ಲಾಡ್ಜ್‌ಗೆ ಆಗಮಿಸಿದ ಪೊಲೀಸರು, ಪರಿಶೀಲನೆ ನಡೆಸಿ ವಿನಯ್ ಕುಮಾರ್ ನನ್ನು ಬಂಧನ ಮುಕ್ತಗೊಳಿಸಿದ್ದಾರೆ. ಈ ಸಂಬಂಧ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News