​ಲಾರಿ- ಬೈಕ್ ಢಿಕ್ಕಿ: ಇಬ್ಬರು ಸವಾರರು ಮೃತ್ಯು

Update: 2019-06-10 16:14 GMT

ಬೈಂದೂರು, ಜೂ.10: ಲಾರಿಯೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಮೃತಪಟ್ಟ ಘಟನೆ ಜೂ.9ರಂದು ರಾತ್ರಿ 9.30ರ ಸುಮಾರಿಗೆ ಶಿರೂರು ವಿಜಯ ಬ್ಯಾಂಕ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

 ಮೃತರನ್ನು ಶಿರೂರು ಅಳ್ವೆಗದ್ದೆಯ ನಿವಾಸಿಗಳಾದ ನಾಗರಾಜ(33) ಹಾಗೂ ದುರ್ಗಪ್ಪ ಮೊಗೇರ(43) ಎಂದು ಗುರುತಿಸಲಾಗಿದೆ. ನಾಗರಾಜ ತನ್ನ ಬೈಕಿನಲ್ಲಿ ದುರ್ಗಪ್ಪರನ್ನು ಸಹಸವಾರರನ್ನಾಗಿಸಿಕೊಂಡು ಶಿರೂರಿನಿಂದ ಭಟ್ಕಳ ಕಡೆಗೆ ಹೋಗುತ್ತಿದ್ದರು. ಈ ವೇಳೆ ಭಟ್ಕಳ ಕಡೆಯಿಂದ ಶಿರೂರು ಕಡೆಗೆ ಬರುತ್ತಿದ್ದ ಲಾರಿ ಎದುರುಗಡೆಯಿಂದ ಹೋಗುತ್ತಿದ್ದ ವಾಹನವೊಂದನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಬೈಕ್ ಸವಾರರು ಕುಂದಾ ಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖ ಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News