ಗ್ರಾಮ ವಾಸ್ತವ್ಯ: ರೈಲಿನಲ್ಲಿ ಉತ್ತರ ಕರ್ನಾಟಕ್ಕೆ ಪ್ರಯಾಣಿಸಲಿರುವ ಸಿಎಂ

Update: 2019-06-11 14:30 GMT

ಬೆಂಗಳೂರು, ಜೂ.11: ಗ್ರಾಮೀಣ ಜನರ ಬದುಕು ಮತ್ತು ಬವಣೆಯನ್ನು ಸ್ವತಃ ಅರಿಯಲು ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇದೇ ತಿಂಗಳಿನಿಂದ ಗ್ರಾಮ ವಾಸ್ತವ್ಯ ಮಾಡಲಿದ್ದು, ಇದಕ್ಕಾಗಿ ರೈಲಿನಲ್ಲಿಯೇ ಪ್ರಯಾಣ ಬೆಳೆಸಲಿದ್ದಾರೆ. ಜೂ.20ರಂದು ಬೆಂಗಳೂರಿನಿಂದ ಹೊರಡಲಿರುವ ಕರ್ನಾಟಕ ಎಕ್ಸ್‌ಪ್ರೆಸ್ ರೈಲಿನ ಮೂಲಕ ಯಾದಗಿರಿ ಜಿಲ್ಲೆಗೆ ಕುಮಾರಸ್ವಾಮಿ ತಲುಪಲಿದ್ದು, ಜೂ.21ರಂದು ಗುರುಮಿಠ್ಕಲ್ ತಾಲೂಕಿನ ಚಂಡರಕಿ ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಅಂದೇ ಜನತಾದರ್ಶನದಲ್ಲಿ ಪಾಲ್ಗೊಂಡು, ಗ್ರಾಮಸ್ಥರ ಮನವಿ ಸ್ವೀಕರಿಸಿ, ಕುಂದು ಕೊರತೆಗಳ ಆಲಿಸಲಿದ್ದಾರೆ. ಜೊತೆಗೆ, ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮುಖ್ಯ ಅತಿಥಿಗಳಾಗಿ ಭಾಗಿಯಾಗಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News