ಕಾರು ಢಿಕ್ಕಿ: ಬೈಕ್ ಸವಾರ ಮೃತ್ಯು
Update: 2019-06-11 16:17 GMT
ಬೈಂದೂರು, ಜೂ.11: ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಾಗೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜೂ.10ರಂದು ಸಂಜೆ 7:30ರ ಸುಮಾರಿಗೆ ನಡೆದಿದೆ.
ಮೃತರನ್ನು ಖಂಬದಕೋಣೆ ಪಟ್ನ ನಿವಾಸಿ ಪ್ರವೀಣ್ ಮೊಗವೀರ(25) ಎಂದು ಗುರುತಿಸಲಾಗಿದೆ. ಖಂಬದಕೋಣೆ ಕಡೆಯಿಂದ ನಾಗೂರು ಕಡೆಗೆ ಹೋಗುತ್ತಿದ್ದ ಬೈಕಿಗೆ ನಾಗೂರು ಕಡೆಯಿಂದ ಖಂಬದಕೋಣೆ ಕಡೆಗೆ ಬರುತ್ತಿದ್ದ ಕಾರು ಎದುರಿನಲ್ಲಿದ್ದ ವಾಹನವೊಂದನ್ನು ಓವರ್ಟೇಕ್ ಮಾಡುವ ಭರದಲ್ಲಿ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರ ಪರಿಣಾಮ ಸವಾರ ಪ್ರವೀಣ್ ಮೊಗವೀರ ಬೈಕ್ ಸಮೇತ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದು ಬಂದಿದೆ. ಕಾರು ಚಾಲಕ ಕಾರನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.