ಅಪಘಾತದಲ್ಲಿ ಗಾಯಗೊಂಡಿದ್ದ ಅಭಿಮಾನಿಗೆ ದರ್ಶನ್ ಧನ ಸಹಾಯ

Update: 2019-06-11 18:18 GMT

ಮಂಡ್ಯ, ಜೂ.11: ಅಪಘಾತದಲ್ಲಿ ಗಾಯಗೊಂಡಿದ್ದ ಅಭಿಮಾನಿ ಕಿರಣ್‍ಗೆ ಚಿತ್ರನಟ ದರ್ಶನ್ ಒಂದು ಲಕ್ಷ ರೂ. ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಊರಮಾರಲಕಸಲಗೆರೆ ಗ್ರಾಮದ ಕಿರಣ್ ಕುಟುಂಬಕ್ಕೆ ದರ್ಶನ್ ಸಹಾಯ ಮಾಡಿದ್ದಾರೆ. ಮಂಡ್ಯ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಸುಮಲತಾ ಅವರ ಪರ ಪ್ರಚಾರ ಮುಗಿಸಿ ವಾಪಸ್ಸಾಗುವಾಗ ಅಪಘಾತವಾಗಿ ಕಿರಣ್ ತೀವ್ರ ಗಾಯಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News