ಸಾಲಬಾಧೆ: ರೈತ ಆತ್ಮಹತ್ಯೆ

Update: 2019-06-12 08:08 GMT

ಶಿವಮೊಗ್ಗ, ಜೂ.12: ಸಾಲಬಾಧೆಯಿಂದ ಮನನೊಂದು ರೈತನೋರ್ವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೈದ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ದೊಂಬೆ ಗ್ರಾಮದಲ್ಲಿ ನಡೆದಿದೆ. 

ಸುಬ್ಬ ನಾಯ್ಕ್ (65) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರ ಬಳಿ 1 ಎಕರೆ 29 ಗುಂಟೆ ಜಮೀನು ಇತ್ತು. ಮಳೆಯಿಲ್ಲದೆ ಬೆಳೆ ಹಾಳಾಗಿತ್ತು. ಪ್ರಗತಿ ಗ್ರಾಮೀಣ ಬ್ಯಾಂಕ್ ಮತ್ತು ಸಹಕಾರ ಬ್ಯಾಂಕ್ ಗಳಲ್ಲಿ ಸಾಲ ಮಾಡಿದ್ದರು. ಸಾಲ ತೀರಿಸಲಾಗದೆ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News