ವಿದೇಶದಲ್ಲಿ ಕೆಲಸ ಕಳೆದುಕೊಂಡ ಚಿಂತೆಯಲ್ಲಿ ಆತ್ಮಹತ್ಯೆ

Update: 2019-06-12 16:16 GMT

ಕಾಪು, ಜೂ.12: ವಿದೇಶದಲ್ಲಿ ಕೆಲಸ ಕಳೆದುಕೊಂಡ ಚಿಂತೆಯಲ್ಲಿ ವ್ಯಕ್ತಿ ಯೊಬ್ಬರು ಆತ್ಮಹತ್ಯೆ ಮಾಡಿಕೊಡ ಘಟನೆ ಜೂ.11ರಂದು ಬೆಳಗ್ಗೆ ಕಟಪಾಡಿ ಕೋಟೆ ಎಂಬಲ್ಲಿ ನಡೆದಿದೆ.

ಮೃತರನ್ನು ಸದಾನಂದ ಪೂಜಾರಿ (55) ಎಂದು ಗುರುತಿಸಲಾಗಿದೆ.

ಇವರು ವಿದೇಶದಲ್ಲಿ ಕೆಲಸ ಮಾಡಿಕೊಂಡಿದ್ದು 3 ತಿಂಗಳ ಹಿಂದೆ ಮದುವೆಗೆಂದು ಊರಿಗೆ ಬಂದಿದ್ದರು. ಈ ಸಂದರ್ಭದಲ್ಲಿ ವಿದೇಶದಲ್ಲಿ ಅವರಿಗೆ ಕೆಲಸ ತಪ್ಪಿ ಹೋಗಿತ್ತೆನ್ನಲಾಗಿದೆ. ಇದೇ ವಿಚಾರದಲ್ಲಿ ಮನನೊಂದ ಅವರು ಮನೆಯ ಮೇಲಿನ ಅಂತಸ್ತಿಗೆ ಹೋಗುವ ಮೆಟ್ಟಿಲಿನ ರೇಲಿಂಗ್ಸ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾಪು ಪೊಲಿೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News