ದ.ಕ ಜಿಲ್ಲಾ ಕೈ ಮುಖಂಡರೊಂದಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಚರ್ಚೆ
Update: 2019-06-12 17:18 GMT
ಬೆಂಗಳೂರು, ಜೂ. 12: ಮುಂಬರಲಿರುವ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಸೇರಿ ದಕ್ಷಿಣ ಕನ್ನಡ ಕಾಂಗ್ರೆಸ್ ಮುಖಂಡರೊಂದಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಮಾಲೋಚನೆ ನಡೆಸಿದರು.
ಬುಧವಾರ ಇಲ್ಲಿನ ಕ್ವೀನ್ಸ್ರಸ್ತೆಯಲ್ಲಿನ ಕೆಪಿಸಿಸಿ ಕಚೇರಿ ಸಚಿವ ಯು.ಟಿ.ಖಾದರ್, ಪರಿಷತ್ ಸದಸ್ಯ ಐವಾನ್ ಡಿಸೋಜಾ, ಮಾಜಿ ಸಚಿವ ಅಭಯ್ಚಂದ್ರ, ಮಾಜಿ ಶಾಸಕರಾದ ಮೊಯ್ದಿನ್ ಬಾವಾ, ಜೆ.ಆರ್.ಲೋಬೋ, ಮಿಥುನ್ ರೈ, ಹರೀಶ್ ಕುಮಾರ್ ಸೇರಿದಂತೆ ಇನ್ನಿತರ ಮುಖಂಡರು ಪಾಲ್ಗೊಂಡಿದ್ದರು.
ಕೋರ್ಟ್ನಲ್ಲಿ ಪ್ರಕರಣ ಬಾಕಿ ಇದ್ದ ಹಿನ್ನೆಲೆಯಲ್ಲಿ 38 ನಗರ ಸ್ಥಳೀಯ ಸಂಸ್ಥೆಗಳಿಗೆ ಮುಂಬರಲಿರುವ ಆಗಸ್ಟ್ ಅಥವಾ ಸೆಪ್ಟಂಬರ್ನಲ್ಲಿ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಆ ಹಿನ್ನೆಲೆಯಲ್ಲಿ ಪಕ್ಷದ ಗೆಲುವಿಗೆ ಸಂಬಂಧಿಸಿದಂತೆ ಅಧ್ಯಕ್ಷರ ಜತೆ ಚರ್ಚೆ ನಡೆಸಲಾಗಿದೆ ಎಂದು ಮುಖಂಡರು ಹೇಳಿದ್ದಾರೆ.