ಬಲ್ಯ: ಬೈಕಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ; ಬೈಕ್ ಸವಾರ ವಿದ್ಯಾರ್ಥಿ ಮೃತ್ಯು
Update: 2019-06-13 07:41 GMT
ಕಡಬ, ಜೂ.13. ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಲ್ಯದಲ್ಲಿ ಇಂದು ನಡೆದಿದೆ.
ಮೃತರನ್ನು ಬಲ್ಯ ಮದ್ರಾಡಿ ನಿವಾಸಿ ರಾಮಚಂದ್ರ ಗೌಡ ಎಂಬವರ ಪುತ್ರ ಸುಬ್ರಹ್ಮಣ್ಯ ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿ ಮೋಕ್ಷಿತ್(21) ಎಂದು ಗುರುತಿಸಲಾಗಿದೆ.
ಮೋಕ್ಷಿತ್ ತನ್ನ ಪಲ್ಸರ್ ಬೈಕಿನಲ್ಲಿ ಬಲ್ಯದಿಂದ ಕಡಬಕ್ಕೆ ತೆರಳುತ್ತಿದ್ದಾಗ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿಯುಂಟಾಗಿ ಈ ದುರ್ಘಟನೆ ಸಂಭವಿಸಿದೆ.
ಮೃತದೇಹವನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಇರಿಸಲಾಗಿದೆ.