ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

Update: 2019-06-13 08:10 GMT

ಬೆಂಗಳೂರು, ಜೂ.13: ರಾಜ್ಯ ಸರಕಾರವು ಜಿಂದಾಲ್ ಕಂಪೆನಿಗೆ 3667 ಎಕರೆ ಜಮೀನು ನೀಡಲು ಮುಂದಾಗಿರುವುದನ್ನು ವಿರೋಧಿಸಿ ಹಾಗೂ ಮೈತ್ರಿ ಸರ್ಕಾರ ವೈಫಲ್ಯಗಳ ವಿರುದ್ಧ ರಾಜ್ಯ ಬಿಜೆಪಿ ಯುವ ಮೋರ್ಚಾವು ಬೆಂಗಳೂರಿನಲ್ಲಿಂದು ಪ್ರತಿಭಟನೆ ನಡೆಸಿತು.

ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಸದರಾದ ತೇಜಸ್ವಿ ಸೂರ್ಯ, ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ,  ತಮ್ಮೇಶ್ ಗೌಡ, ಬೆಂಗಳೂರು ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಪ್ತಗಿರಿ ಗೌಡ ಹಾಗೂ ನಗರದ ಯುವ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

ಬಳಿಕ ವಿಧಾನಸೌಧದತ್ತ ಮುತ್ತಿಗೆಗೆ ತೆರಳಿದ ಅಶೋಕ್, ರವಿಕುಮಾರ್, ವಿಜಯೇಂದ್ರ ಸೇರಿದಂತೆ ಮುಖಂಡರು, ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News