ಎಸಿಬಿ ಬಲೆಗೆ ಬಿದ್ದ ಗ್ರಾಮ ಪಂಚಾಯತ್ ಪಿಡಿಓ

Update: 2019-06-13 18:29 GMT

ಶಿವಮೊಗ್ಗ, ಜೂ. 13: ಜಮೀನು ಖಾತೆ ಮಾಡಿಕೊಡಲು ವ್ಯಕ್ತಿಯೋರ್ವರಿಂದ ಹಣ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ (ಪಿಡಿಓ) ಯೋರ್ವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. 

ನೀಲಪ್ಪ ಬೂತಣ್ಣವರ್ ಎಸಿಬಿ ಬಲೆಗೆ ಬಿದ್ದ ಪಿಡಿಓ ಎಂದು ಗುರುತಿಸಲಾಗಿದೆ. ಜಮೀನು ಖಾತೆ ಮಾಡಿಕೊಡಲು ಪಿಡಿಓ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ 10 ಸಾವಿರ ರೂ. ಲಂಚ ಪಡೆಯುವಾಗ ಎಸಿಬಿ ಪೊಲೀಸರು ದಾಳಿ ನಡೆಸಿ, ಹಣದ ಸಮೇತ ಪಿಡಿಓರನ್ನು ಬಂಧಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News