ಪಟ್ಲ ಫೌಂಡೇಶನ್ ಟ್ರಸ್ಟ್‌ನಿಂದ ಧನ್ಯೋತ್ಸವ ಕಾರ್ಯಕ್ರಮ

Update: 2019-06-14 12:49 GMT

ಮಂಗಳೂರು, ಜೂ.14: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಆಶ್ರಯದಲ್ಲಿ ಇತ್ತೀಚೆಗೆ ಅಡ್ಯಾರ್‌ಗಾರ್ಡ್‌ನಲ್ಲಿ ನಡೆದ ಪಟ್ಲ ಸಂಭ್ರಮದ ಯಶಸ್ಸಿಗೆ ದುಡಿದ ಘಟಕಗಳ ಪದಾಧಿಕಾರಿ ಮತ್ತು ಸದಸ್ಯರಿಗೆ ಧನ್ಯೋತ್ಸವ ಕಾರ್ಯಕ್ರಮವು ನಗರದ ಬೆಂದೂರ್‌ವೆಲ್ ಬಳಿಯ ಅಭಿಮಾನ್ ಟೆಕ್ಸಸ್ ಕಮ್ಯುನಿಟಿ ಹಾಲ್‌ನಲ್ಲಿ ಇತ್ತೀಚೆಗೆ ಜರುಗಿತು.

ಎಲ್ಲಾ ಘಟಕಗಳ ಪದಾಧಿಕಾರಿಗಳು ಸದಸ್ಯರು, ಕಲಾವಿದರು,ಮಹಿಳಾ ಘಟಕಗಳು ನಿರಂತರವಾಗಿ ಕೆಲಸ ಮಾಡಿದ ಪರಿಣಾಮ ಪಟ್ಲ ಸಂಭ್ರಮ ಅದ್ದೂರಿಯಾಗಿ ನೆರವೇರಿತು ಎಂದು ಪಟ್ಲ ಫೌಂಡೇಶನ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಪಟ್ಲ ಗುತ್ತು ಸತೀಶ ಶೆಟ್ಟಿ ತಿಳಿಸಿದರಲ್ಲದೆ ಮುಂದಿನ ವರ್ಷ ಪಟ್ಲ ಸಂಭ್ರಮದ 5ನೇ ವರ್ಷಾಚರಣೆಯನ್ನು ಅರ್ಥಪೂರ್ಣವಾಗಿ ನಡೆಸಲು ಕಾರ್ಯಯೋಜನೆ ರೂಪಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಮಂಗಳೂರು ಘಟಕದ ಸಂಚಾಲಕ ನಿಟ್ಟೆ ಗುತ್ತು ರವಿರಾಜ ಶೆಟ್ಟಿ, ನಿತ್ಯಾನಂದ ಶೆಟ್ಟಿ, ಸವಣೂರು ಸೀತಾರಾಮ ರೈ, ಭುಜಬಲಿ ಧರ್ಮಸ್ಥಳ, ಲಕ್ಷ್ಮೀಶ ಭಂಡಾರಿ, ಜಯರಾಮ ಶೇಖ, ಕೇಂದ್ರೀಯ ಘಟಕದ ಉಪಾಧ್ಯಕ್ಷ ಮನುರಾವ್, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್, ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ, ಜತೆ ಕಾರ್ಯದರ್ಶಿ ರಾಜೀವ ಪೂಜಾರಿ ಕೈಕಂಬ, ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ, ಜಗನ್ನಾಥ್ ಶೆಟ್ಟಿ ಬಾಳ, ದುರ್ಗಾಪ್ರಕಾಶ್ ಈರೋಡ್, ಮಹಿಳಾ ಘಟಕದ ಗೌರವಾಧ್ಯಕ್ಷೆ ಆರತಿ ಆಳ್ವ, ಅಧ್ಯಕ್ಷೆ ಪೂರ್ಣಿಮಾ ಯತೀಶ್ ರೈ ಉಪಸ್ಥಿತರಿದ್ದರು.

ಸರಪಾಡಿ ಅಶೋಕ ಶೆಟ್ಟಿ, ಭಾಸ್ಕರ ರೈ ಕುಕ್ಕುವಳ್ಳಿ, ಪ್ರದೀಪ್ ಆಳ್ವ ಕದ್ರಿ, ಪಡು ಶರತ್ ಶೆಟ್ಟಿ, ಕದ್ರಿ ನವನೀತ ಶೆಟ್ಟಿ, ಮಹವೀರ್ ಪಾಂಡಿ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News