ದಲಿತ ಯುವಕನ ಬೆತ್ತಲೆ ಮೆರವಣಿಗೆ: ದಸಂಸ ಒಕ್ಕೂಟ ಖಂಡನೆ; ಜೂ. 15ರಂದು ಪ್ರತಿಭಟನೆ

Update: 2019-06-14 15:36 GMT

ಉಡುಪಿ, ಜೂ.14: ಗುಂಡ್ಲುಪೇಟೆ ತಾಲೂಕಿನ ವೀರನಪುರ ಗ್ರಾಮದ ದಲಿತ ಯುವಕ ಪ್ರತಾಪ್ ದೇವಸ್ಥಾನದಲ್ಲಿ ಮಲಗಿ ಅಪವಿತ್ರಗೊಳಿಸಿದನೆಂಬ ಹಿನ್ನಲೆಯಲ್ಲಿ ಆತನ ಮೇಲೆ ಸುಳ್ಳು ಆರೋಪ ಹೊರಿಸಿ ಆತನ ಬಟ್ಟೆ ಬಿಚ್ಚಿ ಬೆತ್ತಲೆ ಮೆರವಣಿಗೆ ಮಾಡಿರುವ ಅಮಾನವೀಯ ಕೃತ್ಯವನ್ನು ಉಡುಪಿ ಜಿಲ್ಲೆ ದಲಿತ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸಿದೆ.

ಘಟನೆಯನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಮತ್ತು ದಲಿತ ದಮನಿತರ ಸ್ವಾಭಿಮಾನಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಜೂ. 15ರ ಶನಿವಾರ ಸಂಜೆ 5:15ಕ್ಕೆ ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಬಳಿ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ ಎಂದು ಸಂಘಟಕರ ಪರವಾಗಿ ಶ್ಯಾಮರಾಜ್ ಬಿರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News