ದೇವಾಲಯದ ಹುಂಡಿ ಕಳವು ಪ್ರಕರಣ: 6 ಮಂದಿ ಬಂಧನ

Update: 2019-06-14 16:43 GMT

ಬೆಂಗಳೂರು, ಜೂ.14: ದೇವಾಲಯಗಳನ್ನು ಗುರಿಯಾಗಿಸಿಕೊಂಡು ಹುಂಡಿಗಳನ್ನು ದೋಚಿ ಪರಾರಿಯಾಗುತ್ತಿದ್ದ ಆರೋಪದಡಿ 6 ಜನರನ್ನು ಇಲ್ಲಿನ ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿ, 9.50 ಲಕ್ಷ ರೂ. ಮೌಲ್ಯದ ಮಾಲು ಜಪ್ತಿ ಮಾಡಿದ್ದಾರೆ.

ಮೈಸೂರು ಮೂಲದ ಕಬ್ಬಾಳು(26), ಕುಮಾರ(26), ಮಂಜುನಾಥ್(27), ವಿಜಯ್ಕುಮಾರ್(25), ಬಸವ(37) ಮತ್ತು ಪಿಚ್ಚಗುನ್ನ(25) ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.

ರಾತ್ರಿ ವೇಳೆಯಲ್ಲಿ ದೇವಾಲಯಗಳ ಬಾಗಿಲು ಒಡೆದು ಕಳ್ಳತನ ಮಾಡುತ್ತಿದ್ದ ಬಗ್ಗೆ ಅಮೃತಹಳ್ಳಿ ಪೊಲೀಸರು ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಿದ್ದು, ಒಟ್ಟು 10 ಪ್ರಕರಣಗಳು ಬೆಳಕಿಗೆ ಬಂದಿದೆ. ಇವರಿಂದ 3 ಲಕ್ಷ ಬೆಲೆಬಾಳುವ ಚಿನ್ನಾಭರಣ, 4.50 ಲಕ್ಷ ರೂ. ನಗದು, 3 ಬೈಕ್, ಆಟೊರಿಕ್ಷಾ ಜಪ್ತಿ ಮಾಡಿ ತನಿಖೆ ಮುಂದುವರೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News