ಅತ್ತಾವರ ವಾರ್ಡ್ ಕಾಂಗ್ರೆಸ್‌ನಿಂದ ಉಚಿತ ಪುಸ್ತಕ ವಿತರಣೆ

Update: 2019-06-14 17:45 GMT

ಮಂಗಳೂರು, ಜೂ.14: ಜೆಪ್ಪು ಮಹಾಕಾಳಿಪಡ್ಪು ಜಿಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ವಿದ್ಯಾರ್ಥಿಗಳಿಗೆ ಅತ್ತಾವರ ವಾರ್ಡ್ ಕಾಂಗ್ರೆಸ್ ಸಮಿತಿಯಿಂದ ಶುಕ್ರವಾರ ಉಚಿತವಾಗಿ ಪುಸ್ತಕಗಳನ್ನು ವಿತರಿಸಲಾಯಿತು.

ಈ ಸಂದರ್ಭ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರದಾನ ಕಾರ್ಯದರ್ಶಿ ಟಿ.ಕೆ. ಸುಧೀರ್ ಮಾತನಾಡಿ, ಕಳೆದ 17 ವರ್ಷಗಳಿಂದ ಈ ಶಾಲೆಯಲ್ಲಿ ಕಲಿಯುವ ಮಕ್ಕಳಿಗೆ ಉಚಿತವಾಗಿ ಪುಸ್ತಕಗಳನ್ನು ನೀಡುತ್ತಾ ಬಂದಿದ್ದೇವೆ. ಆರ್ಥಿಕವಾಗಿ ತೀರಾ ಬಡವರ ಮಕ್ಕಳು ಈ ಶಾಲೆಯಲ್ಲಿ ವಿದ್ಯಾರ್ಜನೆ ಮಾಡುತ್ತಿದ್ದಾರೆ. ಉಚಿತವಾಗಿ ಪುಸ್ತಕಗಳನ್ನು ನೀಡಿದರೆ ಮಕ್ಕಳಿಗೆ ಮಾತ್ರವಲ್ಲದೇ ಅವರ ಹೆತ್ತವರಿಗೂ ಬಹಳಷ್ಟು ಪ್ರಯೋಜನಕಾರಿಯಾಗುತ್ತದೆ. ಶಾಲೆಯಲ್ಲಿ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಲು ಶಿಕ್ಷಕರು ಹೆಚ್ಚಿನ ಆಸಕ್ತಿ ವಹಿಸಬೇಕು ಎಂದರು.

ಕಾಂಗ್ರೆಸ್ ಪರಿಶಿಷ್ಟ ಜಾತಿ/ ಪಂಗಡ ಘಟಕದ ರಾಜ್ಯ ಸಂಚಾಲಕ ಟಿ.ಹೊನ್ನಯ್ಯ ಮಾತನಾಡಿ, ಮಕ್ಕಳಿಗೆ ಕನ್ನಡ ಮಾಧ್ಯಮ ಮತ್ತು ಇಂಗ್ಲೀಷ್ ಮಾಧ್ಯಮವೆಂಬ ಕೀಳರಿಮೆ ಇರಬಾರದು. ಬಹಳಷ್ಟು ನಮ್ಮ ನೇತಾರರು ಕನ್ನಡ ಮಾಧ್ಯಮದಲ್ಲಿಯೇ ಕಲಿತು ಹೆಸರುವಾಸಿಯಾಗಿದ್ದಾರೆ ಎಂದರು.

ವಾರ್ಡ್ ಅಧ್ಯಕ್ಷ ಜಯಂತ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಕಾರ್ಪೊರೇಟರ್ ಟಿ.ಕೆ. ಶೈಲಜಾ, ಪಕ್ಷದ ಪ್ರಮುಖರಾದ ಮುಹಮ್ಮದ್ ನವಾಝ್, ಅಶೋಕ್ ಕುಡುಪಾಡಿ, ಕೀರ್ತಿರಾಜ್, ಬಾಬು ಸುವರ್ಣ, ವಿದ್ಯಾ ಮೊದಲಾದವರು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ಅನಿತಾ ಕಾರ್ಯಕ್ರಮ ನಿರೂಪಿಸಿದರು. ಕೊನೆಯಲ್ಲಿ ಮಕ್ಕಳಿಗೆ ಸಿಹಿ ತಿಂಡಿಗಳನ್ನು ವಿತರಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News