ಬಸ್-ಬೈಕ್ ಮುಖಾಮುಕಿ ಢಿಕ್ಕಿ: ಇಬ್ಬರು ಯುವಕರು ಮೃತ್ಯು

Update: 2019-06-15 12:30 GMT

ಚಾಮರಾಜನಗರ: ಬಸ್ ಮತ್ತು ಬೈಕ್ ನಡುವೆ ಮುಖಾಮುಕಿ ಢಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಬಂಡೀಪುರ ಸಮೀಪದ ಕೆಕ್ಕನಹಳ್ಳ ಸಮೀಪ ನಡೆದಿದೆ.

ಮೈಸೂರು- ಊಟಿಗೆ ಸಂಚಾರ ಮಾಡುವ ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ನಡೆದಿದ್ದು, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸೋಮಣ್ಣ (21) ಗೋಕುಲ್(22) ಮೃತಪಟ್ಟವರೆಂದು ತಿಳಿದು ಬಂದಿದ್ದು, ಬಂಡೀಪುರ ರಾಷ್ಟ್ರೀಯ ಹೆದ್ದಾರಿ-67 ರಲ್ಲಿ ಘಟನೆ ನಡೆದಿದೆ.

ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News