ಕೌಟುಂಬಿಕ ಕಲಹ ಹಿನ್ನೆಲೆ: ವ್ಯಕ್ತಿ ಆತ್ಮಹತ್ಯೆ

Update: 2019-06-15 14:25 GMT

ಮಂಡ್ಯ, ಜೂ.15: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವರು ತನ್ನ ಮಕ್ಕಳನ್ನು ಶಾಲೆಗೆ ಬಿಟ್ಟು, ನಿರ್ಜನ ಪ್ರದೇಶದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಹಂಪಾಪುರ ಗೇಟ್ ಬಳಿ ನಡೆದಿದೆ.

ಮೈಸೂರಿನ ಗೌಡಳ್ಳಿ ಗ್ರಾಮದ ವೀರಭದ್ರ(37) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಬೆಳಗ್ಗೆ ಬೈಕ್‍ನಲ್ಲಿ ತನ್ನ ಮಕ್ಕಳನ್ನು ಶಾಲೆಗೆ ಬಿಟ್ಟು, ನಂತರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷ ಸೇವಿಸಿದ ನಂತರ ತನ್ನ ಸಹೋದರನಿಗೆ ಕರೆ ಮಾಡಿ ವಿಷಯ ತಿಳಿಸಿದ್ದು, ಸಹೋದರ ಬರುವ ವೇಳೆಗೆ ಬೈಕ್ ಮೇಲೆಯೇ ಸಾವಿಗೀಡಾಗಿದ್ದರು ಎನ್ನಲಾಗಿದೆ.

ಅರಕೆರೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News