ಧಾರವಾಡ, ಕಲಬುರಗಿ ಹೈಕೋರ್ಟ್‌ಗಳಿಗೆ ಹೆಚ್ಚುವರಿ ಎಜಿ ಗಳ ನೇಮಕಾತಿಗೆ ಮನವಿ

Update: 2019-06-15 14:33 GMT

ಬೆಂಗಳೂರು, ಜೂ. 15: ಧಾರವಾಡ ಹಾಗೂ ಕಲಬುರಗಿ ಹೈಕೋರ್ಟ್‌ಗೆ ಹೆಚ್ಚುವರಿ ಅಡ್ವೋಕೇಟ್ ಜನರಲ್ ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಬೇಕು ಎಂದು ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಕುಮಾರಸ್ವಾಮಿಗೆ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ 5 ಹೆಚ್ಚುವರಿ ಅಡ್ವೋಕೇಟ್ ಜನರಲ್ ಹುದ್ದೆಗಳ ಮಂಜೂರಾಗಿದ್ದು, ಆ ಪೈಕಿ ದಿಲ್ಲಿ, ಕಲಬುರಗಿ, ಧಾರವಾಡ ತಲಾ ಒಂದು ಹಾಗೂ ಬೆಂಗಳೂರು ಹೈಕೋರ್ಟಿಗೆ ಎರಡು ಹುದ್ದೆಗಳು ಮಂಜೂರಾಗಿವೆ. ಆದರೆ, ಧಾರವಾಡ ಹಾಗೂ ಕಲಬುರಗಿಗೆ ಮಾತ್ರ ಇನ್ನೂ ನೇಮಕಾತಿ ಮಾಡಿಲ್ಲ ಎಂದು ಅವರು ಗಮನ ಸೆಳೆದಿದ್ದಾರೆ.

ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಪದೇ ಪದೇ ಹೇಳುತ್ತಿದ್ದರೂ ಸರಕಾರ ಕ್ರಮ ಕೈಗೊಳ್ಳುತ್ತಿಲ್ಲ. ಇನ್ನಾದರೂ ಈ ಅನ್ಯಾಯ ಸರಿಪಡಿಸುವ ದೃಷ್ಟಿಯಿಂದ ಉತ್ತರ ಕರ್ನಾಟಕ ಭಾಗಕ್ಕೆ ಮಂಜೂರಾಗಿರುವ ಹೆಚ್ಚುವರಿ ಅಡ್ವೋಕೇಟ್ ಜನರಲ್ ಹುದ್ದೆಗಳಿಗೆ ನೇಮಕಾತಿ ಮಾಡಬೇಕು ಎಂದು ಹೊರಟ್ಟಿ ಪತ್ರದಲ್ಲಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News