ಗಡ್ಕರಿ ಭೇಟಿಯಾದ ಪಿಣರಾಯಿ ವಿಜಯನ್

Update: 2019-06-15 18:00 GMT

ಹೊಸದಿಲ್ಲಿ, ಜೂ.15: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ ಹೊಸದಿಲ್ಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ರಾಜ್ಯದಲ್ಲಿ ಹಮ್ಮಿಕೊಳ್ಳಲಾಗಿರುವ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಕುರಿತು ಚರ್ಚೆ ನಡೆಸಿದರು.

ಶನಿವಾರ ಹೊಸದಿಲ್ಲಿಯಲ್ಲಿ ನಡೆದ ನೀತಿ ಆಯೋಗದ ಸಭೆಯಲ್ಲಿ ಪಾಲ್ಗೊಳ್ಳು ಆಗಮಿಸಿರುವ ವಿಜಯನ್, ಪ್ರಧಾನಿ ಮೋದಿಯವರನ್ನು ಭೇಟಿಯಾದ ಬಳಿಕ ಗಡ್ಕರಿಯವರೊಂದಿಗೆ ಮಾತುಕತೆ ನಡೆಸಿದರು.

ಗಡ್ಕರಿ- ವಿಜಯನ್ ಮಧ್ಯೆ ನಡೆದ ಸಭೆಯಲ್ಲಿ ವಿದೇಶ ವ್ಯವಹಾರ ಇಲಾಖೆಯ ಉಪಸಚಿವ ಮತ್ತು ಸಂಸದೀಯ ವ್ಯವಹಾರ ಸಚಿವ ವಿ. ಮುರಳೀಧರನ್ ಅವರೂ ಪಾಲ್ಗೊಂಡಿದ್ದರು ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News