ಬಿಜೆಪಿಯವರ ನಿಜ ಬಣ್ಣ ಬಯಲಾಗಿದೆ: ಮುಖ್ಯಮಂತ್ರಿ ಕುಮಾರಸ್ವಾಮಿ ಲೇವಡಿ

Update: 2019-06-16 13:41 GMT

ಬೆಂಗಳೂರು, ಜೂ. 16: ‘ಬಿಜೆಪಿಯ ನಿಜಬಣ್ಣ ಬಯಲಾಗಿದೆ. ಅವರಿಗೆ ಬೇಕಿರುವುದು ಕೇವಲ ಅಗ್ಗದ ಪ್ರಚಾರವೇ ಹೊರತು ಅಭಿವೃದ್ಧಿ ಆಧಾರಿತ ಚರ್ಚೆಯಲ್ಲ’ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ರಾಜ್ಯದ ಅಭಿವೃದ್ಧಿ ಕುರಿತು ಚರ್ಚೆಗೆ ಆಹ್ವಾನಿಸಿ ಪತ್ರವನ್ನು ಸಚಿವ ಸಂಪುಟದ ಸಹೋದ್ಯೋಗಿ ಸಚಿವ ವೆಂಕಟರಾವ್ ನಾಡಗೌಡ ಅವರ ಮೂಲಕ ವಿರೋಧ ಪಕ್ಷದ ನಾಯಕ ಯಡಿಯೂರಪ್ಪನವರಿಗೆ ಕಳುಹಿಸಿದ್ದೆ. ಅವರು ಚರ್ಚೆಗೆ ಸಮಯ ಕೋರಬಹುದು ಎಂದು ನಿರೀಕ್ಷಿಸಿದ್ದೆ ಎಂದು ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.

‘ಬಿಜೆಪಿ ನಾಯಕರ ‘ಅಹೋರಾತ್ರಿ’ ಪ್ರತಿಭಟನೆಯನ್ನು ಗಮನಿಸಿದ್ದೇನೆ. ಸಿಎಂ ಕಚೇರಿಗೆ ಮುತ್ತಿಗೆಯ ಅವಶ್ಯಕತೆಯಿಲ್ಲ. ಜಿಂದಾಲ್, ಬರ, ರೈತರ ಸಾಲಮನ್ನಾ ಸೇರಿದಂತೆ ಎಲ್ಲ ವಿಷಯಗಳ ಬಗ್ಗೆ ಚರ್ಚೆಗೆ ಸಿದ್ದನಿದ್ದೇನೆ. ಪ್ರಧಾನಿ ಸೇರಿ ಕೇಂದ್ರದ ಸಚಿವರೊಂದಿಗೆ ಹಲವು ಸಮಸ್ಯೆ ಕುರಿತು ಚರ್ಚಿಸಿದ್ದೇನೆ. ನಿಮ್ಮ ಸಮಯ ತಿಳಿಸಿ ಚರ್ಚೆಗೆ ನಾನು ಸಿದ್ದ’ ಎಂದು ಮತ್ತೊಂದು ಟ್ವೀಟ್‌ನಲ್ಲಿ ಕುಮಾರಸ್ವಾಮಿ ಪ್ರಕಟಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News