ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಿಖಿಲ್ ಹೆಸರು ಕೇಳಿಬಂದಿಲ್ಲ: ಸಚಿವ ಜಿ.ಟಿ.ದೇವೇಗೌಡ ಸ್ಪಷ್ಟನೆ

Update: 2019-06-16 17:29 GMT

ಮೈಸೂರು,ಜೂ.16: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಿಖಿಲ್ ಹೆಸರು ಕೇಳಿ ಬಂದಿಲ್ಲ ಎಂದು ಉನ್ನತ ಶಿಕ್ಷಣ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಸ್ಪಷ್ಟಪಡಿಸಿದರು.

ನಗರದಲ್ಲಿ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ ನೀಡಿದ್ದರೂ, ಅದು ಅಂಗೀಕಾರವಾಗಿಲ್ಲ, ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎಚ್.ವಿಶ್ವನಾಥ್ ಅವರೆ ಮುಂದುವರಿಯಲಿದ್ದಾರೆ. ನಿಖಿಲ್‍ಗೆ ರಾಜ್ಯಧ್ಯಕ್ಷರಾಗುವ ಸಾಮರ್ಥ್ಯವಿದ್ದರೂ ಅವರ ಹೆಸರು ಎಲ್ಲೂ ಕೇಳಿಬಂದಿಲ್ಲ ಎಂದು ಹೇಳಿದರು.

ಮಧು ಬಂಗಾರಪ್ಪ ಅವರು ಯುವ ಘಟಕದ ಅಧ್ಯಕ್ಷರಾಗಿ ಮುಂದುವರೆಯುತ್ತಾರೆ. ವಿಶ್ವನಾಥ್ ಹಿರಿಯರು. ಅವರೇ ಅಧ್ಯಕ್ಷರಾಗಿ ಮುಂದುವರೆಯಬೇಕು ಎಂಬುದು ನಮ್ಮೆಲ್ಲರ ಇಚ್ಛೆ. ಮುಂದಿನ ದಿನಗಳಲ್ಲಿ ವರಿಷ್ಠರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎಂಬುದನ್ನು ಕಾದು  ನೋಡಬೇಕಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News