ಇಂದು ವೈದ್ಯರ ಮುಷ್ಕರ: ‘ಒಪಿಡಿ’ ಸೇವೆ ಇಲ್ಲ

Update: 2019-06-17 05:48 GMT

ಮಂಗಳೂರು : ಪಶ್ಚಿಮ ಬಂಗಾಳದಲ್ಲಿ ವೈದ್ಯರ ಮೇಲೆ ನಡೆಸಲಾದ ಹಲ್ಲೆ ಕೃತ್ಯವನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘದ ಕರೆಯಂತೆ ಜೂ.17ರ ಬೆಳಗ್ಗೆ 6ರಿಂದ ಜೂ.18ರ ಬೆಳಗ್ಗೆ 6ರವರೆಗೆ ದ.ಕ.ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ‘ಒಪಿಡಿ’ ಹೊರ ರೋಗಿ ವಿಭಾಗ ಕಾರ್ಯನಿರ್ವಹಿಸುವುದಿಲ್ಲ ಎಂದು ಸಂಘದ ದ.ಕ.ಜಿಲ್ಲಾಧ್ಯಕ್ಷ ಡಾ.ಬಿ.ಸಚ್ಚಿದಾನಂದ ರೈ ತಿಳಿಸಿದ್ದಾರೆ.

ದ.ಕ.ಜಿಲ್ಲೆಯ ಎಲ್ಲಾ ಖಾಸಗಿ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ಒಪಿಡಿ ಸಹಿತ ಯಾವುದೇ ಸೇವೆ ನೀಡಲಾಗುವುದಿಲ್ಲ. ಆಸ್ಪತ್ರೆಯ ಮೆಡಿಕಲ್‌ಗಳಲ್ಲೂ ಕೂಡ ಔಷಧ ಸಿಗದು. ಆದರೆ, ತುರ್ತು ಸೇವೆಗಳಿಗೆ ವಿನಾಯಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ವೈದ್ಯರ ಮುಷ್ಕರಕ್ಕೆ ಜಿಲ್ಲೆಯ ಆಯುಷ್ ಫೌಂಡೇಶನ್ ಕೂಡ ಬೆಂಬಲ ವ್ಯಕ್ತಪಡಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News