ಪರ್ತಿಪ್ಪಾಡಿ: ಅಲ್-ಬಿರ್ರ್ ಇಸ್ಲಾಮಿಕ್ ಪ್ರೀ ಸ್ಕೂಲ್‍ ಉದ್ಘಾಟನೆ

Update: 2019-06-17 12:38 GMT

ಬಂಟ್ವಾಳ, ಜೂ. 17: ವಿಟ್ಲ ಸಮೀಪದ ಪರ್ತಿಪ್ಪಾಡಿ ಎಂಬಲ್ಲಿ ನೂತನವಾಗಿ ಪ್ರಾರಂಭಿಸಲಾದ ಅಲ್-ಬಿರ್ರ್ ಇಸ್ಲಾಮಿಕ್ ಪ್ರೀ ಸ್ಕೂಲ್‍  ಉದ್ಘಾಟನಾ ಸಮಾರಂಭ ನಡೆಯಿತು.

ದ.ಕ. ಖಾಝಿ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ಶಾಲಾ ತರಗತಿ ಹಾಗೂ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ಕಾಲಘಟ್ಟದಲ್ಲಿ ಇಂತಹ ಶಿಕ್ಷಣ ಸಂಸ್ಥೆಗಳು ಅನಿವಾರ್ಯವಾಗಿದೆ. ಮಕ್ಕಳು ದಾರಿ ತಪ್ಪುತ್ತಿದ್ದು, ಅವರನ್ನು ಸಮಾಜದಲ್ಲಿ ಉತ್ತಮ ಪ್ರಜೆಯನ್ನಾಗಿ ರೂಪಿಸಲು ಅಲ್ ಬಿರ್ರ್ ಅಸ್ತಿತ್ವಕ್ಕೆ ಬಂದಿದೆ. ಪ್ರತಿಯೊಬ್ಬರು ತಾನು ತನ್ನದು ಎಂದು ಭಾವಸದೇ ಸಮಾಜಕ್ಕೆ ಕೊಡುಗೆ ನೀಡುವ ಕಾರ್ಯಗಳು ನಡೆಯಬೇಕು ಎಂದು ಹೇಳಿದರು.

ಕೆ.ಎಸ್. ಸೈಯದ್ ಮುಹಮ್ಮದ್ ಶಮೀಮ್ ತಂಙಳ್ ಕುಂಬೋಳ್ ಶಾಲಾ ಕಟ್ಟಡ ಉದ್ಘಾಟಿಸಿದರು. ವಿಟ್ಲ ಎನ್. ಅಬ್ದುಲ್ಲ ಕುಂಞಿ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಇ.ಕೆ. ಅಬ್ದುರ್ರಹ್ಮಾನ್ ಮುಸ್ಲಿಯಾರ್ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ಅಲ್ ಬಿರ್ರ್ ನ ಕೋ ಆರ್ಡಿನೇಟರ್ ಜಾಬಿರ್ ಹುದವಿ ಮುಖ್ಯ ಪ್ರಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಜಂಇಯ್ಯತ್ತುಲ್ ಉಲಮಾದ ಕಾರ್ಯದರ್ಶಿ ಬಿ.ಕೆ ಅಬ್ದುಲ್ ಖಾದಿರ್ ಅಲ್ ಖಾಸಿಮಿ ಬಂಬ್ರಾಣ, ಕಲ್ಲೇಗ ಮುದರ್ರಿಸ್ ಅಬೂಬಕರ್ ಸಿದ್ದೀಕ್ ಜಲಾಲಿ, ಜಿಲ್ಲಾ ಪಂಚಾಯತ್ ಸದಸ್ಯ ಎಂ.ಎಸ್.ಮುಹಮ್ಮದ್, ವಿಟ್ಲ ಪಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ರವೀಶ್ ಶೆಟ್ಟಿ, ಅನೀಸ್ ಕೌಸರಿ, ಅಬ್ದುಲ್ ರಹಿಮಾನ್ ಫೈಝಿ ಪರ್ತಿಪ್ಪಾಡಿ, ಅಬ್ಬಾಸ್ ದಾರಿಮಿ ಕೆಲಿಂಜ, ಸಿದ್ದೀಕ್ ಅಝ್ಹರಿ ಪಾತೂರು, ಟಿ.ಎಂ. ಹನೀಫ್ ಮೌಲವಿ, ಸಿ.ಎಚ್.ಇಬ್ರಾಹಿಂ ಮುಸ್ಲಿಯಾರ್, ರಶೀದ್ ವಿಟ್ಲ, ಹಕೀಂ ಪರ್ತಿಪ್ಪಾಡಿ, ಇಸ್ಮಾಯಿಲ್ ಪರ್ತಿಪ್ಪಾಡಿ, ಅಬೂಬಕ್ಕರ್ ಹಾಜಿ ಕೊಡುಂಗಾಯಿ, ಖಲಂದರ್ ಪರ್ತಿಪ್ಪಾಡಿ, ಮುಹಮ್ಮದ್ ಇಕ್ಬಾಲ್ ಹೋನೆಸ್ಟ್, ಶರೀಫ್ ಮೂಸಾ ಕುದ್ದುಪದವು, ಶಾಕಿರ್ ಅಳಕೆಮಜಲು, ಇಸ್ಮಾಯಿಲ್ ಅರಫಾ ಪರ್ತಿಪ್ಪಾಡಿ, ಅಕ್ಬರ್ ಅಲಿ, ಕೆ.ಎಂ.ಎ.ಕೊಡುಂಗಾಯಿ ಸ್ವಾಗತಿಸಿದರು. ಇಮ್ರಾನ್ ಹುದವಿ ವಿಟ್ಲ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News