ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯ

Update: 2019-06-17 15:10 GMT

ಉಡುಪಿ, ಜೂ.17: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2019-20ನೇ ಸಾಲಿನಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಗಳನ್ನು ಆಹ್ವಾನಿಸಲಾಗಿದೆ.

ನಿಗಮದ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಛಿಸುವವರು ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು. ಗಂಗಾ ಕಲ್ಯಾಣ ಯೋಜನೆಯಲ್ಲಿ ನೀರಾವರಿ ಸೌಲ್ಯ ಪಡೆಯಲು ಅರ್ಜಿದಾರರು ಸಣ್ಣ ಮತ್ತು ಅತಿಸಣ್ಣ ರೈತರಾಗಿದ್ದು, ಒಂದೇ ಕಡೆ ಹೊಂದಿಕೊಂಡಿರುವಂತೆ 2 ರಿಂದ 5ಎಕರೆ ಜಮೀನು ಹೊಂದಿರಬೇಕು. 18ರಿಂದ 55 ವರ್ಷದೊಳಗಿ ನವರು ಅರ್ಜಿ ಸಲ್ಲಿಸಬಹುದು.

ರಾಜ್ಯ ಸರಕಾರದ ಯೋಜನೆಗಳ ವಿವರ: ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂಉದ್ಯೋಗ ನೇರಸಾಲ ಯೋಜನೆ, ಬ್ಯಾಂಕ್‌ಗಳ ಸಹಯೋಗ ದೊಂದಿಗೆ ಸ್ವಯಂಉದ್ಯೋಗ ಸಾಲ, ಅರಿವು-ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಯೋಜನೆ, ಮಹಿಳೆಯರಿಗೆ ಮೈಕ್ರೋ ಕ್ರೆಡಿಟ್ ಸಾಲ ಯೋಜನೆ, ಕಮ್ಮಾರಿಕೆ, ಅಕ್ಕಸಾಲಿ ಮತ್ತು ಬಡಗಿ ಉದ್ಯಮಿಗಳಿಗೆ ತರಬೇತಿ ಮತ್ತು ಸಾಲ ಯೋಜನೆ.

ಅರ್ಜಿ ನಮೂನೆಗಳನ್ನು ಜಿಲ್ಲೆಯ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಆಯಾ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಜುಲೈ 12ರೊಳಗೆ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿ ಗಳೊಂದಿಗೆ ಜು.22ರ ಒಳಗೆ ಸಲ್ಲಿಸಬೇಕು. ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯ ವಿಳಾಸ ಹಾಗೂ ದೂರವಾಣಿ ಸಂಖ್ಯೆಯನ್ನು ವೆಬ್‌ಸೈಟ್ -www.karnataka.gov.in/kvcdcl- ರಲ್ಲಿ ಪಡೆಯಬಹುದು.

ಈ ಕುರಿತು ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0820-2574882ನ್ನು ಸಂಪರ್ಕಿಸುವಂತೆ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News