ವಾರಾಹಿ ಯೋಜನಾ ಪ್ರದೇಶಕ್ಕೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಭೇಟಿ, ಪರಿಶೀಲನೆ

Update: 2019-06-17 15:31 GMT

ಉಡುಪಿ, ಜೂ.17:ಉಡುಪಿ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ವಾರಾಹಿ ನೀರು ಸರಬರಾಜು ಯೋಜನೆಯ ಪ್ರದೇಶಗಳಿಗೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಅವರು ಸಂಬಂಧಿತ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

 ಕೆಯುಐಡಿಎಫ್‌ಸಿಯ ಅಧಿಕಾರಿಗಳು, ನಗರಸಭೆಯ ಇಂಜಿನಿಯರ್ ಗಳೊಂದಿಗೆ ವಾರಾಹಿ ಯೋಜನಾ ಪ್ರದೇಶಗಳಿಗೆ ಭೇಟಿ ನೀಡಿದ ಶಾಸಕರು, ಭರತ್ಕಲ್‌ನಲ್ಲಿ ನೀರು ಶುದ್ಧೀಕರಣ ಘಟಕ ನಿರ್ಮಾಣದ ಪ್ರದೇಶ ಹಾಗೂ ಭರತ್ಕಲ್‌ನಿಂದ ಉಡುಪಿ ನಗರಕ್ಕೆ ಪೈಪ್‌ಲೈನ್ ಮೂಲಕ ನೀರು ಸರಬರಾಜು ಮಾಡಲಾಗುವ ಪ್ರದೇಶಗಳ ಸ್ಥಳ ಪರಿಶೀಲನೆ ನಡೆಸಿದರು.

ಕೆಯುಐಡಿಎಫ್‌ಸಿಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ರಾಮಕೃಷ್ಣ, ಉಡುಪಿ ನಗರಸಭೆಯ ಸಹಾಯಕ ಅಭಿಯಂತರ ಗಣೇಶ್ ಹಾಗೂ ಪರಿಸರ ಅಭಿಯಂತರ ರಾಘವೇಂದ್ರ ಹಾಗೂ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News