ಪೌರಾಡಳಿತ ಖಾತೆ ಸಿಗುವ ನಿರೀಕ್ಷೆಯಿದೆ: ನೂತನ ಸಚಿವ ಆರ್.ಶಂಕರ್

Update: 2019-06-18 16:17 GMT

ಬೆಂಗಳೂರು, ಜೂ.18: ಕಾಂಗ್ರೆಸ್‌ನಲ್ಲಿ ಒಂದು ಖಾತೆ ಖಾಲಿಯಿದ್ದು, ನನಗೆ ಪೌರಾಡಳಿತ ಇಲಾಖೆ ಸಿಗುವ ನಿರೀಕ್ಷೆಯಿದೆ ಎಂದು ನೂತನ ಸಚಿವ ಆರ್.ಶಂಕರ್ ಹೇಳಿದ್ದಾರೆ.

ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೆಪಿಜೆಪಿ ಪಕ್ಷದಿಂದ ನಾನೊಬ್ಬನೆ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಹೀಗಾಗಿ ಒನ್ ಥರ್ಡ್ ಆಫ್ ದಿ ಮೆಜಾರಿಟಿ ಪ್ರಕಾರ ಕಾಂಗ್ರೆಸ್‌ಗೆ ಸೇರಿದ್ದೇನೆ. ಇದಕ್ಕೆ ಸಂಬಂಧಿಸಿದ ಕಾನೂನು ಚೌಕಟ್ಟಿನಲ್ಲಿರುವ ಎಲ್ಲ ಪ್ರಕ್ರಿಯೆಗಳನ್ನು ಪೂರೈಸಿದ್ದೇನೆಂದು ತಿಳಿಸಿದರು.

ಕಾಂಗ್ರೆಸ್‌ನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕಾರ್ಯಕರ್ತನಾಗಿ ದುಡಿಯಲು ಸಿದ್ಧನಿದ್ದೇನೆ. ಇನ್ನು ಮುಂದೆ ಕಾಂಗ್ರೆಸನ್ನು ಉಸಿರಾಗಿಸಿಕೊಂಡು ಪಕ್ಷವನ್ನು ಸಂಘಟಿಸುತ್ತೇನೆ. ಇದರ ಜೊತೆಗೆ ಯಾವುದೆ ಖಾತೆಗಳನ್ನು ಕೊಟ್ಟರೂ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ಅವರು ವಿಶ್ವಾಸ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News