ವಾರಸುದಾರರಿಗೆ ಸೂಚನೆ

Update: 2019-06-18 16:21 GMT

ಉಡುಪಿ, ಜೂ.18: ಶಿವಳ್ಳಿ ಗ್ರಾಮದ ಉಡುಪಿ ಶ್ರೀಕೃಷ್ಣಮಠದ ರಥಬೀದಿ ಯ ಪಲಿಮಾರು ಮಠದ ಎದುರು ಅಸಹಾಯಕ ಸ್ಥಿತಿಯಲ್ಲಿ ಬಿದ್ದಿದ್ದ 55 ವರ್ಷ ಪ್ರಾಯದ, 5.5 ಅಡಿ ಎತ್ತರದ ಅಪರಿಚಿತ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿ ಯಾಗದೇ ವ್ಯಕ್ತಿ ಮೃತಪಟ್ಟಿದ್ದಾರೆ.

ಮೃತ ಶರೀರವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮೃತರ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 0820-2520444, ಪೊಲೀಸ್ ವೃತ್ತ ನಿರೀಕ್ಷಕರು (0820-2520329), ಉಡುಪಿ ಜಿಲ್ಲಾ ನಿಸ್ಸಂತು ಕಚೇರಿ (0820-2526444), ಉಡುಪಿ ನಗರ ಠಾಣೆಯ ಇ-ಮೇಲ್ udupitownudp@ksp.gov.inನ್ನು ಸಂಪರ್ಕಿಸುವಂತೆ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News