ಬಾವಿಯಲ್ಲಿ ಮೃತದೇಹ ಪತ್ತೆ

Update: 2019-06-18 16:26 GMT

ಉಡುಪಿ, ಜೂ.18: ಬನ್ನಂಜೆಯ ಗೋವಿಂದ ಆಚಾರ್ಯ ಮಾರ್ಗದ ಗರಡಿ ಸಮೀಪದ ಬಾವಿಯೊಂದರಲ್ಲಿ ವೃದ್ಧೆಯೊಬ್ಬರ ಮೃತದೇಹ ಮಂಗಳವಾರ ಪತ್ತೆಯಾಗಿದೆ.

ಮೃತರನ್ನು ಬಾಗಲಕೋಟೆ ಮೂಲದ ನೀಲಮ್ಮ(68) ಎಂದು ಗುರುತಿಸ ಲಾಗಿದೆ. ಇವರು ಬನ್ನಂಜೆಯಲ್ಲಿ ಬಾಡಿಗೆ ಮನೆಯಲ್ಲಿ ಕುಟುಂಬದವರೊಂದಿಗೆ ವಾಸವಾಗಿದ್ದು, ವೈಯಕ್ತಿಕ ಕಾರಣದಿಂದ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News