ಬ್ರಿಮ್ಸ್ ಗೆ ಸಚಿವರ ಭೇಟಿ: ಕಳಪೆ ಕಾಮಗಾರಿ ಬಗ್ಗೆ ಅಸಮಾಧಾನ

Update: 2019-06-18 17:36 GMT

ಬೀದರ್,ಜೂ.18 : ಜಿಲ್ಲಾ ಉಸ್ತುವಾರಿ ಸಚಿವರಾದ ಬಂಡೆಪ್ಪ ಖಾಶೆಂಪುರ ಹಾಗು ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವರಾದ ರಹೀಂ ಖಾನ್ ಅವರು ಜೂನ್ 18ರಂದು ಬ್ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದರು.

ಇತ್ತೀಚೆಗೆ ಬಿದ್ದ ಆಸ್ಪತ್ರೆಯ ಒಂದು ಕಡೆಯ ಮುಂಬಾಗಿಲಿನ ಚಾವಣಿ ನೋಡಿ, ಕಳಪೆ ಕಾಮಗಾರಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು. ಈ ಬಗ್ಗೆ  ಪಿಡಬ್ಲುಡಿ ಇಂಜಿನಿಯರ್ ಪ್ರಶಾಂತ ಅವರೊಂದಿಗೆ ಮಾತನಾಡಿದ ಸಚಿವರು, ಸಂಬಂಧಿಸಿದ ಗುತ್ತಿಗೆದಾರರನ್ನು ಬ್ಲಾಕ್ ಲೀಸ್ಟ್ ಗೆ ಸೇರಿಸಲು ಕ್ರಮವಹಿಸಿ ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ಈ ವೇಳೆ ಆಸ್ಪತ್ರೆಯ ನಿರ್ದೇಶಕರಾದ ಡಾ.ಕ್ಷೀರಸಾಗರ ಅವರೊಂದಿಗೆ ಮಾತನಾಡಿ, ಕಟ್ಟಡದ ಒಳಾಂಗಣದ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಹಾಗೂ ಆಸ್ಪತ್ರೆಯ ವೈದ್ಯಾಧಿಕಾರಿಗಳು ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News