ರಿಕ್ಷಾ- ಬಸ್ ಢಿಕ್ಕಿ: ಎಸೆಸೆಲ್ಸಿ ವಿದ್ಯಾರ್ಥಿ ಗಂಭೀರ ಗಾಯ

Update: 2019-06-19 16:53 GMT

ಉಡುಪಿ, ಜೂ.19: ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ತಂದೆಯ ರಿಕ್ಷಾದಲ್ಲಿ ಶಾಲೆಗೆ ತೆರಳುತ್ತಿದ್ದ ಎಸೆಸೆಲ್ಸಿ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಬೆಳಗ್ಗೆ 8ಗಂಟೆ ಸುಮಾರಿಗೆ ಕೊರಂಗ್ರಪಾಡಿ ಆಟೋರಿಕ್ಷಾ ನಿಲ್ದಾಣ ಬಳಿ ನಡೆದಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಉಡುಪಿಯ ಪಣಿಯಾಡಿ ಬುಡ್ನಾರು ನಿವಾಸಿ ರಿಯಾಝ್ ಎಂಬವರ ಮಗ ರೋಶನ್ (16) ಮಣಿ ಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಲಕ ರಿಯಾಝ್ (40) ಸಣ್ಣಪುಟ್ಟ ಗಾಯಗೊಂಡಿದ್ದಾರೆ.

ಉದ್ಯಾವರ ಕೊರಂಗ್ರಪಾಡಿಯ ಎಂಇಟಿ ಆಂಗ್ಲ ಮಾಧ್ಯಮ ಶಾಲೆಯ ಎಸೆಸೆಲ್ಸಿ ವಿದ್ಯಾರ್ಥಿಯಾಗಿರುವ ರೋಶನ್ ವಿಶೇಷ ತರಗತಿಗಾಗಿ ಇಂದು ತಂದೆಯ ರಿಕ್ಷಾದಲ್ಲಿ ತರಗತಿಗೆ ತೆರಳುತ್ತಿದ್ದನು. ಕುಕ್ಕಿಕಟ್ಟೆ ಕಡೆಯಿಂದ ಕೊರಂಗ್ರ ಪಾಡಿ ಕಡೆಗೆ ಹೋಗುತ್ತಿದ್ದ ವೇಳೆ ಕೊರಂಗ್ರಪಾಡಿಯಿಂದ ಕುಕ್ಕಿಕಟ್ಟೆಗೆ ಬರುತ್ತಿದ್ದ ಬಸ್ಸಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News