ಹಾಲಿ ಕೆಪಿಸಿಸಿಯನ್ನು ವಿಸರ್ಜಿಸಿದ ಎಐಸಿಸಿ
Update: 2019-06-19 09:33 GMT
ಹೊಸದಿಲ್ಲಿ, ಜೂ.19: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕರ್ನಾಟಕದಲ್ಲಿ ಹೀನಾಯ ಸೋಲು ಅನುಭವಿಸಿರುವ ಕೆಪಿಸಿಸಿಗೆ ಮೇಜರ್ ಸರ್ಜರಿ ಮಾಡಲು ಮುಂದಾಗಿರುವ ಎಐಸಿಸಿ ಇದೀಗ ಕೆಪಿಸಿಸಿಯನ್ನು ವಿಸರ್ಜನೆ ಮಾಡಿದೆ.
ಸಮಿತಿಯನ್ನು ವಿಸರ್ಜನೆ ಮಾಡಿದ್ದರೂ, ಕೆಪಿಸಿಸಿ ಅಧ್ಯಕ್ಷರನ್ನು ಮತ್ತು ಕಾರ್ಯಾಧ್ಯಕ್ಷರನ್ನು ಉಳಿಸಿಕೊಳ್ಳಲಾಗಿದೆ.
ಹಾಲಿ ಕೆಪಿಸಿಸಿಯನ್ನು ವಿಸರ್ಜನೆ ಮಾಡಿರುವ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.