ಪ್ರೀತಿಸಿ ವಿವಾಹವಾಗಿದ್ದ ಯುವಕ ಅನುಮಾನಾಸ್ಪದ ಸಾವು: ಕೊಲೆ ಆರೋಪ
Update: 2019-06-19 11:46 GMT
ಶಿವಮೊಗ್ಗ, ಜೂ.19: ಪ್ರೀತಿಸಿ ವಿವಾಹವಾಗಿದ್ದ ಯುವಕನೋರ್ವ ಪತ್ನಿಯ ಊರಿನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಯುವಕನ ಕುಟುಂಬದವರು ಕೊಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿರುವ ಘಟನೆ ನಡೆದಿದೆ.
ಶಿವಮೊಗ್ಗ ತಾಲೂಕಿನ ಹೊಳಲೂರು ಸಮೀಪದ ಸೂಗೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶಿವಮೊಗ್ಗ ನಗರದ ರಾಜೀವ್ ಗಾಂಧಿ ಬಡಾವಣೆಯ ಸಲೀಂ (27) ಅನುಮಾನಾಸ್ಪದವಾಗಿ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.
ಇವರು ಸೂಗೂರು ಗ್ರಾಮದ ಹೀನಾಬಾನು ಎಂಬ ಯುವತಿಯನ್ನು ಪ್ರೀತಿಸಿ ವಿವಾಹವಾಗಿದ್ದರು. ಕೌಟಂಬಿಕ ವೈಷಮ್ಯದ ಹಿನ್ನೆಲೆಯಲ್ಲಿ, ಸಲೀಂ ನನ್ನು ಕೊಲೆ ಮಾಡಿ ನೇಣು ಹಾಕಲಾಗಿದೆ ಎಂದು ಮೃತ ಸಲೀಂ ಕುಟುಂಬದವರು ಆರೋಪಿಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.