ಜೂ.21: ಪತ್ರಿಕಾ ಭವನದಲ್ಲಿ ವಿಶ್ವ ಯೋಗ ದಿನಾಚರಣೆ

Update: 2019-06-19 13:21 GMT

ಮಂಗಳೂರು, ಜೂ.19: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್‌ಕ್ಲಬ್ ಹಾಗೂ ಪತ್ರಿಕಾಭವನ ಟ್ರಸ್ಟ್ನ ಸಹಯೋಗದಲ್ಲಿ ಜೂ.21ರಂದು ಪೂ.11ಗಂಟೆಗೆ ವಿಶ್ವ ಯೋಗ ದಿನಾಚರಣೆ ಹಾಗೂ ಪತ್ರಿಕಾ ಭವನದಲ್ಲಿ ಒಂದು ತಿಂಗಳುಗಳ ಕಾಲ ನಡೆದ ಯೋಗ ಶಿಬಿರದ ಸಮಾರೋಪ ಸಮಾರಂಭ ನಡೆಯಲಿದೆ.

ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ ಎಂ ಲಕ್ಷ್ಮಿಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಐಸಿರಿ ಹೆಲ್ದಿ ಇಂಡಿಯಾ ಮಿಷನ್‌ನ ನಿರ್ದೇಶಕ ದರ್ಶನ್ ಜೈನ್, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಆನಂದ ಶೆಟ್ಟಿ ಭಾಗವಹಿಸಲಿದ್ದಾರೆ.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News