ಅಪಘಾತಕ್ಕೆ ಪಾದಚಾರಿ ಮೃತ್ಯು

Update: 2019-06-19 15:30 GMT

ಮಂಗಳೂರು, ಜೂ.19: ಮೂಲ್ಕಿ-ಕಿನ್ನಿಗೋಳಿ ರಸ್ತೆಯ ಬಟ್ಟಕೋಡಿ ಬಳಿ ಮಂಗಳವಾರ ರಾತ್ರಿ ರಸ್ತೆ ದಾಟುತ್ತಿದ್ದ ಜನಾರ್ದನ ಎಂಬವರಿಗೆ ಟಾಟಾ ಸುಮೋ ವಾಹನ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದಾರೆ.

ಜನಾರ್ದನ ಅವರು ಮಂಗಳವಾರ ರಾತ್ರಿ 9 ಗಂಟೆಗೆ ಉತ್ತರದಿಂದ ದಕ್ಷಿಣಕ್ಕೆ ದಾಟುತ್ತಿದ್ದಾಗ ಮೂಲ್ಕಿ ಕಡೆಯಿಂದ ಕಿನ್ನಿಗೋಳಿ ಕಡೆಗೆ ಅತಿ ವೇಗವಾಗಿ ಚಲಾಯಿಸಿಕೊಂಡು ಬಂದ ಟಾಟಾ ಸುಮೋ ಢಿಕ್ಕಿಯಾಗಿದೆ. ಪರಿಣಾಮ ತಲೆಗೆ, ಎರಡು ಕಾಲುಗಳಿಗೆ ಗಂಭೀರ ಸ್ವರೂಪದ ಗಾಯವಾಗಿದೆ.

ಕೂಡಲೇ ಗಾಯಾಳುವನ್ನು ಕಿನ್ನಿಗೋಳಿ ಕನ್ಸೆಟ್ಟಾ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮಂಗಳೂರು ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News