ಮಡಿಕೇರಿ: ಮಳೆಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ದೇಶಪಾಂಡೆ ಭೇಟಿ
Update: 2019-06-19 17:43 GMT
ಮಡಿಕೇರಿ, ಜೂ.19: ಪ್ರಕೃತಿ ವಿಕೋಪ ಸಂಭವಿಸಿದ ಮಡಿಕೇರಿ-ಸೋಮವಾರಪೇಟೆ ಮಾರ್ಗದ ರಾಜ್ಯ ಹೆದ್ದಾರಿ ಹಾಲೇರಿ ಬಳಿ ನಿರ್ಮಿಸಲಾಗಿರುವ ಕಾಮಗಾರಿಯನ್ನು ಕಂದಾಯ ಸಚಿವರಾದ ಆರ್.ವಿ.ದೇಶಪಾಂಡೆ ಅವರು ಪರಿಶೀಲಿಸಿದರು.
ಕರ್ಣಂಗೇರಿಯಲ್ಲಿ ಸಂತ್ರಸ್ತರಿಗೆ ನಿರ್ಮಿಸಿರುವ ಮನೆಗಳನ್ನು ಸಚಿವರು ವೀಕ್ಷಣೆ ಮಾಡಿದರು. ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಜಿ.ಪಂ.ಸದಸ್ಯರಾದ ಕೆ.ಪಿ.ಚಂದ್ರಕಲಾ, ಪ್ರಾದೇಶಿಕ ಆಯುಕ್ತ ಯಶವಂತ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪಿ., ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಲೋಕೋಪಯೋಗಿ ಇಲಾಖೆಯ ಇಇ ಇಬ್ರಾಹಿಂ, ಜಿ.ಪಂ. ಇಇ ಶ್ರೀಕಂಠಯ್ಯ, ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ಷಂಶುದ್ದೀನ್, ರಾಜೀವ್ ಗಾಂಧಿ ವಸತಿ ನಿಗಮದ ಎಂಜಿನಿಯರ್ ಶ್ರೀನಿವಾಸ್ ಇತರರು ಹಾಜರಿದ್ದರು.