ಸಿಇಟಿ, ಕೆಇಎ ಕಾಲೇಜು ಆಯ್ಕೆ ಪ್ರಕ್ರಿಯೆಗೆ ಉಚಿತ ಸೌಲಭ್ಯ

Update: 2019-06-20 13:38 GMT

ಉಡುಪಿ, ಜೂ.20: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ 2019 ಇದರ ಪ್ರವೇಶ ಸುತ್ತಿನ ಆಯ್ಕೆಗಳನ್ನು ಮಾಡಿಕೊಳ್ಳಲು ಆಸಕ್ತ ವಿದ್ಯಾರ್ಥಿ ಗಳಿಗೆ ಮತ್ತು ಪೋಷಕರಿಗೆ ಅನುಕೂಲವಾಗಲೆಂಬ ದೃಷ್ಟಿಯಿಂದ ಉಡುಪಿಯ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಅಂಗ ಸಂಸ್ಥೆಯಾದ ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು ಅಗತ್ಯವಿರುವ ಎಲ್ಲಾ ಸೌಲಭ್ಯವನ್ನು ಒದಗಿಸಲಿದೆ.

ಬಂಟಕಲ್ಲಿನಲ್ಲಿರುವ ಕಾಲೇಜಿನಲ್ಲಿ ಅಥವಾ ಉಡುಪಿ ರಥಬೀದಿಯ ಭೂ ವರಾಹ ಸಂಕೀರ್ಣದಲ್ಲಿರುವ ಪ್ರತಿಷ್ಠಾನದ ಕಚೇರಿಯಲ್ಲಿ ಪ್ರಾಧಿಕಾರ ನಿಗದಿ ಪಡಿಸಿದ ದಿನಗಳಂದು ಬೆಳಿಗ್ಗೆ 9ರಿಂದ ಸಂಜೆ 5ರತನಕ ಈ ಉಚಿತ ಸೌಲಭ್ಯ ವನ್ನು ಆಸಕ್ತ ವಿದ್ಯಾರ್ಥಿಗಳು ಮತ್ತು ಪೋಷಕರು ಪಡೆದು ಕೊಳ್ಳಬೇಕಾಗಿ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News