ಕೊಪ್ಪಳ: ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷರಾಗಿ ನಾಸಿರುದ್ದೀನ್ ಖಾದ್ರಿ ಅಧಿಕಾರ ಸ್ವೀಕಾರ

Update: 2019-06-20 14:11 GMT

ಕೊಪ್ಪಳ, ಜೂ. 20 : ಕೊಪ್ಪಳ ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷರಾಗಿ ಸೈಯದ್ ನಾಸಿರುದ್ದೀನ್ ಖಾದ್ರಿ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.  

ಕೊಪ್ಪಳ ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷರನ್ನಾಗಿ ಗಂಗಾವತಿಯ ಜಾಮಿಯ ಮಸ್ಜಿದ್ ಅಧ್ಯಕ್ಷ ಸೈಯದ್ ನಾಸಿರುದ್ದೀನ್ ಖಾದ್ರಿ ಅವರನ್ನು ರಾಜ್ಯ ಸರ್ಕಾರವು ನೇಮಿಸಿ ಆದೇಶ ಹೊರಡಿಸಿದ್ದು, ಇಂದು ಅವರು ಸರ್ಕಾರದ ಆದೇಶ ಪತ್ರವನ್ನು ಕೊಪ್ಪಳ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅವರಿಗೆ ಸಲ್ಲಿಸಿ ಜಿಲ್ಲಾ ವಕ್ಫ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. 

ಜಿಲ್ಲಾ ವಕ್ಫ್ ಅಧಿಕಾರಿ ಮಕ್ಬುಲ್‍ ಪಾಶಾ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದು, ಹೂ ಗುಚ್ಚ ನೀಡಿ ನೂತನ ಅಧ್ಯಕ್ಷರಿಗೆ ಅಭಿನಂದನೆಯನ್ನು ಸಲ್ಲಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News