ಸೆಬಿ ಸಂಪನ್ಮೂಲ ವ್ಯಕ್ತಿಯಾಗಿ ಡಾ.ರಾಧಾಕೃಷ್ಣ ನೇಮಕ

Update: 2019-06-20 14:55 GMT

ಶಿರ್ವ, ಜೂ.20: ನಿಟ್ಟೆ ಜಸ್ಟಿಸ್ ಕೆ.ಎಸ್.ಹೆಗ್ಡೆ ಇನ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ಪ್ರೊ. ಡಾ.ರಾಧಾಕೃಷ್ಣ ಶರ್ಮಾ ಬಂಟಕಲ್ಲು ಇವರನ್ನು ಸೆಬಿ(ಎಸ್‌ಇಬಿಐ)ಯು ವೈಯಕ್ತಿಕ ಹಣಕಾಸು ನಿರ್ವಹಣೆಯ ಬಗ್ಗೆ ಉಡುಪಿ ಸೇರಿದಂತೆ ಆಸುಪಾಸಿನ ಜಿಲ್ಲೆಗಳಲ್ಲಿ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು ಅಧಿಕೃತ ಸಂಪನ್ಮೂಲ ವ್ಯಕ್ತಿಯಾಗಿ ನೇಮಕ ಮಾಡಿದೆ.

ಕಾರ್ಯಾಗಾರದಲ್ಲಿ ಸಮಾಜದಲ್ಲಿ ನಿರಂತರವಾಗಿ ನಡೆಯುತ್ತಿರುವ ಹಣ ಕಾಸಿನ ವಂಚನೆ ಪ್ರಕರಣಗಳ ಬಗ್ಗೆ ಅರಿವು ಮೂಡಿಸಿ, ವಿವಿಧ ಹೂಡಿಕೆಗಳ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಲಾಗುತ್ತದೆ.

ಈ ತರಬೇತಿಯು ಸಂಪೂರ್ಣ ಉಚಿತವಾಗಿದ್ದು, ಆಸಕ್ತ ಯಾವುದೇ ಸಂಘ ಸಂಸ್ಥೆಗಳು ತಮ್ಮ ಉದ್ಯೋಗಿಗಳಿಗೆ, ಸದಸ್ಯರಿಗೆ ಕಾರ್ಯಕ್ರಮ ಆಯೋಜಿಸಿ ಇವರಿಂದ ಸಂಪೂರ್ಣ ಪ್ರಯೋಜನ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ 9741117251ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News