ಲಾರಿ ಅಡ್ಡಗಟ್ಟಿ ಚಾಲಕನಿಂದ ಹಣ ದರೋಡೆ

Update: 2019-06-20 18:02 GMT

ಮಂಡ್ಯ, ಜೂ.20: ಲಾರಿಯನ್ನು ಅಡ್ಡಗಟ್ಟಿ ಚಾಲಕನಿಂದ 15 ಸಾವಿರ ರೂ., ಮೊಬೈಲ್ ದೋಚಿ ಪರಾರಿಯಾಗಿರುವ ಘಟನೆ ಮೈಸೂರು-ಬೆಂಗಳೂರು ಹೆದ್ದಾರಿಯ ಬೊಮ್ಮೂರು ಅಗ್ರಹಾರ ಗ್ರಾಮದ ಬಳಿ ಬುಧವಾರ ತಡರಾತ್ರಿ ನಡೆದಿದೆ.

ಕಾರು ಮತ್ತು ಬೈಕ್‍ನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡದಿಂದ ಕೃತ್ಯ ನಡೆದಿದ್ದು, ಸ್ಥಳಕ್ಕೆ ಶ್ರೀರಂಗಪಟ್ಟಣ ಪೊಲೀಸರ ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News