ತೊಕ್ಕೊಟ್ಟಿನಲ್ಲಿ ಟ್ರಾಫಿಕ್ ಪೊಲೀಸ್‌ಗೆ ಹಲ್ಲೆ: ಆರೋಪಿ ಬೈಕ್ ಸವಾರನ ಬಂಧನ

Update: 2019-06-21 07:21 GMT

ಮಂಗಳೂರು, ಜೂ.21: ಹೆಲ್ಮೆಟ್ ಧರಿಸದೆ ಬೈಕ್ ಸವಾರಿ ಮಾಡುತ್ತಿದ್ದ ಬೈಕಿನ ಫೋಟೊ ತೆಗೆದ ಟ್ರಾಫಿಕ್ ಕಾನ್‌ಸ್ಟೇಬಲ್ ಮೇಲೆ ಬೈಕ್ ಸವಾರನೋರ್ವ ನಿಂದಿಸಿ ಹಲ್ಲೆ ನಡೆಸಿದ ಘಟನೆ ತೊಕ್ಕೊಟ್ಟಿನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮದನಿ ನಗರ ನಿವಾಸಿ ಅಝರ್ ಬಂಧಿತ ಆರೋಪಿ. ಇಂದು ಬೆಳಗ್ಗೆ ತೊಕ್ಕೊಟ್ಟಿನ ಫ್ಲೈಓವರ್ ಸಮೀಪ ಈತ ಹೆಲ್ಮೆಟ್ ಧರಿಸದೆ ಬೈಕಿನಲ್ಲಿ ಸಂಚರಿಸುತ್ತಿದ್ದನೆನ್ನಲಾಗಿದೆ. ಇದನ್ನು ಗಮನಿಸಿದ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ಸಿಬ್ಬಂದಿ ಸಂಗಣ್ಣ ಗೌಡ ಬೈಕಿನ ಫೋಟೊ ತೆಗೆದಿದ್ದಾರೆ. ಈ ವೇಳೆ ಸಂಗಣ್ಣರ ಮೇಲೆ ಆರೋಪಿ ಅಝರ್ ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸಿದನೆನ್ನಲಾಗಿದೆ. ಈ ಬಗ್ಗೆ ಸಂಗಣ್ಣ ನೀಡಿರುವ ದೂರನ್ನು ಆಧರಿಸಿ ಆರೋಪಿ ಅಝರ್‌ನನ್ನು ಉಳ್ಳಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News