ಬಂಟ್ವಾಳದ ವಿವಿಧೆಡೆ ಎಸ್‍ಡಿಪಿಐ ಸಂಸ್ಥಾಪನಾ ದಿನಾಚರಣೆ

Update: 2019-06-21 13:02 GMT

ಬಂಟ್ವಾಳ, ಜೂ. 21: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಇದರ 11ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಟ್ಲ ಹಾಗೂ ಬಂಟ್ವಾಳದ ವಿವಿಧೆಡೆ ಧ್ವಜಾರೋರಣ ಕಾರ್ಯಕ್ರಮ ಜರಗಿತು.

ಎಸ್‍ಡಿಪಿಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮವು ಕಚೇರಿಯ ಮುಂಭಾಗದಲ್ಲಿ ನಡೆಯಿತು. ಕ್ಷೇತ್ರಾಧ್ಯಕ್ಷ ಯೂಸುಫ್ ಆಲಡ್ಕ್ರಧ್ಯಕ್ಷತೆ ವಹಿಸಿ ಧ್ವಜಾರೋಹಣ ನೆರವೇರಿಸಿದರು.ನಂತರ ನಡೆದ ಸಭಾ ಎಸ್‍ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷಇಲ್ಯಾಸ್ ಮುಹಮ್ಮದ್ ತುಂಬೆ ಅವರು ಮುಖ್ಯ ಭಾಷಣ ಮಾಡಿದರು. 

ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಹಮೀದ್ ಎಸ್.ಎಚ್, ಪಿಎಫ್‍ಐ ಬಂಟ್ವಾಳ ತಾಲೂಕು ಅಧ್ಯಕ್ಷ ಇಜಾಝ್ ಅಹ್ಮದ್, ಬಂಟ್ವಾಳ ಪುರಸಭಾ ಸದಸ್ಯರಾದ ಮೂನೀಶ್ ಅಲಿ, ಇದ್ರೀಸ್ ಪಿ.ಜೆ, ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಬಾವಾ ಸ್ವಾಗತಿಸಿ, ಅಮಿತಿ ಕಾರ್ಯದರ್ಶಿ ಇಸಾಕ್ ತಲಪಾಡಿ ವಂದಿಸಿದರು.

ಎಸ್‍ಡಿಪಿಐ ತಲಪಾಡಿ ಘಟಕದ ವತಿಯಿಂದ ತಲಪಾಡಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ತಲಪಾಡಿ ಘಟಕ ಅಧ್ಯಕ್ಷ ಶಾಹುಲ್ ತಲಪಾಡಿ ಧ್ವಜಾರೋಹಣ ನೆರವೇರಿಸಿದರು.

ಈ ಸಂಧರ್ಭದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯ ಇಸಾಕ್ ತಲಪಾಡಿ, ಬಿ.ಸಿ. ಲತೀಫ್, ಪಹದ್, ಹಫೀಝ್, ಮುಬಾರಕ್ ಪೊನ್ನೋಡಿ ಉಪಸ್ಥಿತರಿದ್ದರು. ಅಶ್ರಫ್ ಬಿ.ಎಂ.ಟಿ. ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News