ಮಧ್ಯಂತರ ಚುನಾವಣೆಗೆ ಅವಕಾಶ ನೀಡುವುದಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ

Update: 2019-06-21 14:29 GMT

ಬೆಂಗಳೂರು, ಜೂ.21: ರಾಜ್ಯ ವಿಧಾನಸಭೆಗೆ ಮಧ್ಯಂತರ ಚುನಾವಣೆ ಆಗಲು ಬಿಡುವುದಿಲ್ಲ. ಕಾಂಗ್ರೆಸ್-ಜೆಡಿಎಸ್‌ಗೆ ಆಡಳಿತ ನಡೆಸಲು ಯೋಗ್ಯತೆ ಇಲ್ಲದಿದ್ದರೆ ಅಧಿಕಾರ ಬಿಟ್ಟು ಹೋಗಲಿ. ನಾವು ಅಧಿಕಾರ ನಡೆಸುತ್ತೇವೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. 

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಿಶ್ಚಿತ. ಇದರಲ್ಲಿ ಯಾವುದೆ ಸಂಶಯ ಬೇಡವೆಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಕಾಂಗ್ರೆಸ್, ಜೆಡಿಎಸ್ ನಾಯಕರ ಹೇಳಿಕೆಗಳು ಗೊಂದಲದ ಗೂಡಾಗಿದೆ. ಮನಸ್ಸಿಗೆ ಬಂದಂತೆ ಮಾತಾಡಿ ಗೊಂದಲ ಸೃಷ್ಟಿಸಬಾರದು. ಒಂದೇ ವರ್ಷದಲ್ಲಿ ಮತ್ತೊಂದು ಚುನಾವಣೆಗೆ ನಾವು ಹಾಗೂ ಜನತೆ ಒಪ್ಪುವುದಿಲ್ಲವೆಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News