×
Ad

ಆರೂರು ಗ್ರಾಪಂ ವಿಶೇಷ ಗ್ರಾಮಸಭೆ

Update: 2019-06-21 20:46 IST

ಉಡುಪಿ, ಜೂ.21: ಆರೂರು ಗ್ರಾಮ ಪಂಚಾಯತ್‌ನ 2019-20ನೇ ಸಾಲಿನ ಪ್ರಥಮ ಹಂತದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆ ವಿಶೇಷ ಗ್ರಾಮ ಸಭೆಯು ಇತ್ತೀಚೆಗೆ ಆರೂರು ಗ್ರಾಪಂ ಸಭಾಭವನದಲ್ಲಿ ಜರಗಿತು.

 ಅಧ್ಯಕ್ಷತೆಯನ್ನು ನೋಡೆಲ್ ಅಧಿಕಾರಿ, ತೋಟಗಾರಿಕಾ ಇಲಾಖೆಯ ಅಧಿಕಾರಿ ದೀಪಾ ವಹಿಸಿದ್ದರು. ತಾಲೂಕು ಸಂಯೋಜಕ ಪ್ರವೀಣ್ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಬಗ್ಗೆ ಮಾಹಿತಿ ನೀಡಿದರು. ಆರೂರು ಗ್ರಾಪಂ ಅಧ್ಯಕ್ಷ ರಾಜೀವ ಕುಲಾಲ್ ಮಾತನಾಡಿದರು.

ಸಭೆಯಲ್ಲಿ ಉಪಾಧ್ಯಕ್ಷ ಗಣೇಶ್ ಕುಲಾಲ್, ಸದಸ್ಯರಾದ ಮಾಲಿನಿ ಶೆಟ್ಟಿ, ಸುಶೀಲ ಬಾಯಿ, ಮನೋಜ್ ನಾಯ್ಕ, ಸಂಪನ್ಮೂಲ ವ್ಯಕ್ತಿಗಳಾದ ಕಾವ್ಯ ಪ್ರಭಾಕರ್, ರಾಜೇಶ್, ಸುಮಲತ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು. ಪಂಚಾಯತ್ ಅಭಿವೃಧ್ಧಿ ಅಧಿಕಾರಿ ಗೀತಾ ಬಾಳಿಗಾ ಸ್ವಾಗತಿಸಿ, ಾರ್ಯಕ್ರಮ ನಿರೂಪಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News