×
Ad

ಉಡುಪಿ: ಪುಸ್ತಕ ಬಹುಮಾನಕ್ಕೆ ಕನ್ನಡ ಪುಸ್ತಕಗಳ ಆಹ್ವಾನ

Update: 2019-06-21 22:06 IST

ಉಡುಪಿ, ಜೂ. 21: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2018ನೇ ಸಾಲಿನ ಪುಸ್ತಕ ಯೋಜನೆಗಾಗಿ ಕಾವ್ಯ, ನವಕವಿಗಳ ಪ್ರಥಮ ಸಂಕಲನ, ಕಾವ್ಯ ಹಸ್ತಪ್ರತಿ (30 ವರ್ಷ ಒಳಗಿರುವ ಯುವ ಕವಿಗಳು ತಮ್ಮ ಪ್ರಕಟಿತ ಪ್ರಥಮ ಕವನ ಸಂಕಲನದ ಹಸ್ತಪ್ರತಿಯನ್ನು ಕಳುಹಿಸಬೇಕು), ಕಾದಂಬರಿ, ಸಣ್ಣಕತೆ, ನಾಟಕ, ಲಲಿತ ಪ್ರಬಂಧ, ಪ್ರವಾಸ ಸಾಹಿತ್ಯ, ಜೀವನಚರಿತ್ರೆ/ಆತ್ಮಕಥೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ, ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ, ಸಂಶೋಧನೆ, ವೈಚಾರಿಕ/ಅಂಕಣ ಬರಹ, ಅನುವಾದ-ಸೃಜನ- ಸೃಜನೇತರ, ಅನುವಾದ-2- ಕನ್ನಡದಿಂದ ಅನ್ಯಬಾಷೆಗೆ ಅನುವಾದಗೊಂಡ ಕೃತಿ, ಲೇಖಕರ ಮೊದಲ ಸ್ವತಂತ್ರ ಕೃತಿಗೆ ಬಹುಮಾನಕ್ಕೆ ಕನ್ನಡ ಪುಸ್ತಕಗಳನ್ನು ಆಹ್ವಾನಿಸಲಾಗಿದೆ.

ಪ್ರತಿ ಪ್ರಕಾರದಲ್ಲಿ ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2018ರ ಜ.1ರಿಂದ ಡಿ.31ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2018 ಎಂದು ಮುದ್ರಿತವಾಗಿರಬೇಕು.

ಮೇಲ್ಕಂಡ ಅವಧಿಯಲ್ಲಿ ಪ್ರಕಟವಾದ ಪುಸ್ತಕಗಳ ತಲಾ 2 ಪ್ರತಿಗಳನ್ನು ರಿಜಿಸ್ಟ್ರಾರ್, ಕನ್ನಡ ಸಾಹಿತ್ಯ ಅಕಾಡೆಮಿ, ಕನ್ನಡ ಭವನ, ಬೆಂಗಳೂರು ಇವರಿಗೆ ರಿಜಿಸ್ಟರ್ಡ್ ಅಂಚೆ / ಕೊರಿಯರ್ ಮೂಲಕ ಅಥವಾ ಖುದ್ದಾಗಿ ಜು.10ರ ಒಳಗೆ ತಲುಪುವಂತೆ ಕಳುಹಿಸಬೇಕು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News