ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ

Update: 2019-06-21 17:17 GMT

ಮಂಡ್ಯ, ಜೂ.21: ಸಾಲಬಾಧೆ ತಾಳಲಾರದೆ ಕೃಷ್ಣರಾಜಪೇಟೆ ತಾಲೂಕಿನ ದೊಡ್ಡತ್ತಾರಹಳ್ಳಿ ಗ್ರಾಮದ ರೈತ ಮಂಜುಶೆಟ್ಟಿ (38) ಜಮೀನನ ಬಳಿ ಇರುವ ಗುಡಿಸಲಿನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೃಷಿ ಚಟುವಟಿಕೆಗೆ ಮಹಿಳಾ ಸಂಘ, ಕಾವೇರಿ ಗ್ರಾಮೀಣ ಬ್ಯಾಂಕ್‍ನಲ್ಲಿ ಹೆಂಡತಿಯ ಚಿನ್ನಾಭರಣಗಳನ್ನು ಗಿರಿವಿ ಇಟ್ಟು 1.5 ಲಕ್ಷ ರೂ. ಸಾಲ, ಧರ್ಮಸ್ಥಳ ಸಂಘದಲ್ಲಿ 50 ಸಾವಿರ ಹಾಗೂ ಕೈ ಸಾಲ ಒಂದು ಲಕ್ಷ, ಒಟ್ಟು ಮೂರು ಲಕ್ಷ ಸಾಲ ಮಾಡಿಕೊಂಡಿದ್ದರೆನ್ನಲಾಗಿದೆ.

ಸಾಲಗಾರರ ಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸಂಬಂಧ ಕಿಕ್ಕೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News