ಟಿಪ್ಪರ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

Update: 2019-06-21 18:30 GMT

ಹಾಸನ, ಜೂ.21: ಟಿಪ್ಪರ್ ಲಾರಿ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಸಮೀಪ ವಿಜಯ ನಗರ ಬಡಾವಣೆಯಲ್ಲಿ ನಡೆದಿದೆ.

ದೇವೇಗೌಡ ನಗರದ ನಿವಾಸಿ ಲಾರಿ ಮೆಕ್ಯಾನಿಕ್ ಮೆಹಬೂಬ್ ಖಾನ್ (42) ಮೃತ ವ್ಯಕ್ತಿ. ಶುಕ್ರವಾರ ಬೆಳಗ್ಗೆ ಬೈಕಿನಲ್ಲಿ ತಣ್ಣಿರುಹಳ್ಳದಿಂದ ವಿಜಯ ನಗರ ಬಡಾವಣೆ ಕಡೆ ಹೋಗುತ್ತಿದ್ದಾಗ ವೇಗವಾಗಿ ಬಂದ ಟಿಪ್ಪರ್ ಲಾರಿ ಹಿಂಬದಿಯಿಂದ ಬಂದು ಢಿಕ್ಕಿ ಹೊಡೆದಿದ್ದು, ಪರಿಣಾಮ ತಲೆಗೆ ಹೆಚ್ಚಿನ ಪೆಟ್ಟು ಬಿದ್ದು ರಕ್ತಸ್ರಾವವಾಗಿದ್ದರಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News